Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರನಟ ರಾಜ್ ಕುಮಾರ್ ರನ್ನು ನೆನೆದ ಸಿದ್ಧರಾಮಯ್ಯ
Recommended Video
ನಟ ರಾಜ್ ಕುಮಾರ್ ಅವರ ಜನ್ಮದಿನದ ಅಂಗವಾಗಿ ಸಾಕಷ್ಟು ಕಾರ್ಯಕ್ರಮಗಳು ಇಂದು ನಡೆಯುತ್ತಿದೆ. ಈ ಸುದಿನ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ ಕುಮಾರ್ ರನ್ನು ನೆನೆದಿದ್ದಾರೆ.
ಟ್ವಿಟ್ಟರ್ ಖಾತೆಯಲ್ಲಿ ರಾಜ್ ಕುಮಾರ್ ಬಗ್ಗೆ ಬರೆದುಕೊಂಡಿರುವ ಅವರು ''ನಟಸಾರ್ವಭೌಮ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಕನ್ನಡದ ಅನರ್ಘ್ಯ ರತ್ನ ಎಲ್ಲವೂ ಆಗಿರುವ ಡಾ.ರಾಜಕುಮಾರ್ ಅವರು ನನ್ನ ಪಾಲಿಗೆ 'ನನ್ನ ಕಾಡಿನವರು'. ಅವರ ನಾಡು ನುಡಿಯ ಬಗೆಗಿನ ಪ್ರೀತಿ- ಬದ್ಧತೆ ನನಗೆ ಸದಾ ಸ್ಪೂರ್ತಿ. ರಾಜ್ ಕುಮಾರ್ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಸ್ಮರಿಸುತ್ತೇನೆ.'' ಎಂದಿದ್ದಾರೆ.
''ನಮ್ಮ ತಂದೆ ರಾಜ್ ಕುಮಾರ್ ಅವರ ದೊಡ್ಡ ಫ್ಯಾನ್'' ಅಣ್ಣಾವ್ರ ಬಗ್ಗೆ ಅಭಿಷೇಕ್ ಮಾತು ಕೇಳಿ!
ಸಿನಿಮಾಗಳ ಮೇಲೆ ಪ್ರೀತಿ ಹೊಂದಿರುವ ಸಿದ್ಧರಾಮಯ್ಯರಿಗೆ ರಾಜ್ ಅಂದರೆ ಅಭಿಮಾನ ಜಾಸ್ತಿ. ರಾಜ್ ಹಾಗೂ ಸಿದ್ಧರಾಮಯ್ಯ ಒಂದೇ ಭಾಗದವರು. ಅದೇ ಕಾರಣಕ್ಕೆ ಸಿದ್ಧರಾಮಯ್ಯರನ್ನು ಯಾವಾಗ ಭೇಟಿ ಮಾಡಿದರೂ ರಾಜ್ 'ನನ್ನ ಕಾಡಿನವರು' ಎನ್ನುತ್ತಿದ್ದರು. ಈಗ ಅದೇ ಮಾತನ್ನು ಸಿದ್ಧರಾಮಯ್ಯ ನೆನೆದಿದ್ದಾರೆ.
ಈ ಹಿಂದೆಯೂ ಅನೇಕ ಕಾರ್ಯಕ್ರಮಗಳಲ್ಲಿ ಹಾಗೂ 'ವಿಕೇಂಡ್ ವಿತ್ ರಮೇಶ್' ಸಂಚಿಕೆಯಲ್ಲಿಯೂ ರಾಜ್ ಕುಮಾರ್ ಜೊತೆಗಿನ ಸ್ನೇಹವನ್ನು ಸಿದ್ಧರಾಮಯ್ಯ ಹೇಳಿಕೊಂಡಿದ್ದರು. ಅವರ ಸಿನಿಮಾಗಳು ಅಂದರೆ ಸಿದ್ಧರಾಮಯ್ಯರಿಗೆ ಬಹಳ ಇಷ್ಟ ಅಂತೆ.
ನಟಸಾರ್ವಭೌಮ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಕನ್ನಡದ ಅನರ್ಘ್ಯ ರತ್ನ ಎಲ್ಲವೂ ಆಗಿರುವ ಡಾ.ರಾಜಕುಮಾರ್ ಅವರು ನನ್ನ ಪಾಲಿಗೆ 'ನನ್ನ ಕಾಡಿನವರು'.
— Siddaramaiah (@siddaramaiah) April 24, 2019
ಅವರ ನಾಡು ನುಡಿಯ ಬಗೆಗಿನ ಪ್ರೀತಿ- ಬದ್ಧತೆ ನನಗೆ ಸದಾ ಸ್ಪೂರ್ತಿ. ರಾಜ್ ಕುಮಾರ್ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಸ್ಮರಿಸುತ್ತೇನೆ.@INCKarnataka #DrRajkumar pic.twitter.com/q93iRD09PN
ಮುತ್ತುರಾಜನ ಮುತ್ತಿನಂಥ ಮಾತುಗಳನ್ನು ಅವರ ಧ್ವನಿಯಲ್ಲೇ ಕೇಳಿ
ಮತ್ತೊಂದು ವಿಷಯ ಏನೆಂದರೆ, ಈ ರೀತಿ ರಾಜಕೀಯ ವ್ಯಕ್ತಿಗಳ ಜೊತೆಗೆ ಒಳ್ಳೆಯ ಸ್ನೇಹ ಹೊಂದಿದ್ದರು ರಾಜ್ ಕುಮಾರ್ ಎಂದಿಗೂ ರಾಜಕೀಯ ರಂಗಕ್ಕೆ ಹೋಗಲು ಇಷ್ಟ ಪಡಲಿಲ್ಲ.