Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನಲ್ಲಿ 'ಮಫ್ತಿ' : ಭೈರತಿ ರಣಗಲ್ ಆದ ಸಿಂಬು
ಕನ್ನಡದ ಸೂಪರ್ ಹಿಟ್ ಸಿನಿಮಾ 'ಮಫ್ತಿ' ಈಗ ತಮಿಳಿನಲ್ಲಿ ರಿಮೇಕ್ ಆಗುತ್ತಿದೆ. ಈ ಚಿತ್ರದ ಪೂಜಾ ಕಾರ್ಯಕ್ರಮ ಇತ್ತೀಚಿಗಷ್ಟೆ ನೆರವೇರಿದೆ.
'ಮಫ್ತಿ' ಚಿತ್ರದ ಭೈರತಿ ರಣಗಲ್ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಈ ಪಾತ್ರವನ್ನು ತಮಿಳಿನಲ್ಲಿ ಯಾರು ನಿರ್ವಹಿಸಬಹುದು ಎನ್ನುವ ನಿರೀಕ್ಷೆ ಇತ್ತು. ಅಂದಹಾಗೆ, ಈ ಪಾತ್ರದಲ್ಲಿ ನಟ ಸಿಂಬು ಕಾಣಿಸಿಕೊಳ್ಳುತ್ತಿದ್ದಾರೆ.
ಟಾಲಿವುಡ್ ನಲ್ಲಿ ಮಫ್ತಿ: ಯಾರಾಗ್ತಾರೆ ಭೈರತಿ ರಣಗಲ್ಲು
ಕಾವೇರಿ ವಿಚಾರದಲ್ಲಿ ಕನ್ನಡಿಗರ ಮನ ಗೆದ್ದ ಈ ನಟ ಈಗ ಈ ಸಿನಿಮಾದ ನಾಯಕನಾಗಿದ್ದಾರೆ. 25 ದಿನಗಳ ಕಾಲ ಕಾಲ್ ಶೀಟ್ ನೀಡಿದ್ದು, ಅದರ ಒಳಗೆ ಸಿನಿಮಾದ ಅವರ ಭಾಗದ ಚಿತ್ರೀಕರಣ ಮುಗಿಯಲಿದೆ. ಶ್ರೀ ಮುರಳಿ ಪಾತ್ರದಲ್ಲಿ ಗೌತಮ್ ಕಾರ್ತಿಕ್ ನಟಿಸುತ್ತಿದ್ದಾರೆ. ಸಿಂಬು ಗ್ಯಾಂಗ್ ಸ್ಟರ್ ಹಾಗೂ ಗೌತಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಬಾಹುಬಲಿ ತಮಿಳು ಚಿತ್ರಕ್ಕೆ ಡೈಲಾಗ್ ಬರೆದಿದ್ದ ಮಾಧವನ್ ಕಾರ್ತಿ ಈ ಸಿನಿಮಾಗೂ ಸಂಭಾಷಣೆ ಬರೆದಿದ್ದಾರೆ. ವಿಶೇಷ ಅಂದರೆ, ಕನ್ನಡದ ನಿರ್ದೇಶಕ ನರ್ತನ್ ಅವರೇ ಅಲ್ಲಿಯೂ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡದಲ್ಲಿ ಈ ಸಿನಿಮಾ ಸೂಪರ್ ಹಿಟ್ ಆಗಿದ್ದು, ಈಗ ತಮಿಳಿನಲ್ಲಿ ಸಿನಿಮಾ ಬರುತ್ತಿದೆ. ಕಾಲಿವುಡ್ ನಲ್ಲಿ ಚಿತ್ರ ಗೆಲ್ಲುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.