Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನಲ್ಲಿ 'ಮಫ್ತಿ' : ಭೈರತಿ ರಣಗಲ್ ಆದ ಸಿಂಬು
ಕನ್ನಡದ ಸೂಪರ್ ಹಿಟ್ ಸಿನಿಮಾ 'ಮಫ್ತಿ' ಈಗ ತಮಿಳಿನಲ್ಲಿ ರಿಮೇಕ್ ಆಗುತ್ತಿದೆ. ಈ ಚಿತ್ರದ ಪೂಜಾ ಕಾರ್ಯಕ್ರಮ ಇತ್ತೀಚಿಗಷ್ಟೆ ನೆರವೇರಿದೆ.
'ಮಫ್ತಿ' ಚಿತ್ರದ ಭೈರತಿ ರಣಗಲ್ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಈ ಪಾತ್ರವನ್ನು ತಮಿಳಿನಲ್ಲಿ ಯಾರು ನಿರ್ವಹಿಸಬಹುದು ಎನ್ನುವ ನಿರೀಕ್ಷೆ ಇತ್ತು. ಅಂದಹಾಗೆ, ಈ ಪಾತ್ರದಲ್ಲಿ ನಟ ಸಿಂಬು ಕಾಣಿಸಿಕೊಳ್ಳುತ್ತಿದ್ದಾರೆ.
ಟಾಲಿವುಡ್ ನಲ್ಲಿ ಮಫ್ತಿ: ಯಾರಾಗ್ತಾರೆ ಭೈರತಿ ರಣಗಲ್ಲು
ಕಾವೇರಿ ವಿಚಾರದಲ್ಲಿ ಕನ್ನಡಿಗರ ಮನ ಗೆದ್ದ ಈ ನಟ ಈಗ ಈ ಸಿನಿಮಾದ ನಾಯಕನಾಗಿದ್ದಾರೆ. 25 ದಿನಗಳ ಕಾಲ ಕಾಲ್ ಶೀಟ್ ನೀಡಿದ್ದು, ಅದರ ಒಳಗೆ ಸಿನಿಮಾದ ಅವರ ಭಾಗದ ಚಿತ್ರೀಕರಣ ಮುಗಿಯಲಿದೆ. ಶ್ರೀ ಮುರಳಿ ಪಾತ್ರದಲ್ಲಿ ಗೌತಮ್ ಕಾರ್ತಿಕ್ ನಟಿಸುತ್ತಿದ್ದಾರೆ. ಸಿಂಬು ಗ್ಯಾಂಗ್ ಸ್ಟರ್ ಹಾಗೂ ಗೌತಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಬಾಹುಬಲಿ ತಮಿಳು ಚಿತ್ರಕ್ಕೆ ಡೈಲಾಗ್ ಬರೆದಿದ್ದ ಮಾಧವನ್ ಕಾರ್ತಿ ಈ ಸಿನಿಮಾಗೂ ಸಂಭಾಷಣೆ ಬರೆದಿದ್ದಾರೆ. ವಿಶೇಷ ಅಂದರೆ, ಕನ್ನಡದ ನಿರ್ದೇಶಕ ನರ್ತನ್ ಅವರೇ ಅಲ್ಲಿಯೂ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡದಲ್ಲಿ ಈ ಸಿನಿಮಾ ಸೂಪರ್ ಹಿಟ್ ಆಗಿದ್ದು, ಈಗ ತಮಿಳಿನಲ್ಲಿ ಸಿನಿಮಾ ಬರುತ್ತಿದೆ. ಕಾಲಿವುಡ್ ನಲ್ಲಿ ಚಿತ್ರ ಗೆಲ್ಲುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.