Don't Miss!
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನಲ್ಲಿ 'ಮಫ್ತಿ' : ಭೈರತಿ ರಣಗಲ್ ಆದ ಸಿಂಬು
ಕನ್ನಡದ ಸೂಪರ್ ಹಿಟ್ ಸಿನಿಮಾ 'ಮಫ್ತಿ' ಈಗ ತಮಿಳಿನಲ್ಲಿ ರಿಮೇಕ್ ಆಗುತ್ತಿದೆ. ಈ ಚಿತ್ರದ ಪೂಜಾ ಕಾರ್ಯಕ್ರಮ ಇತ್ತೀಚಿಗಷ್ಟೆ ನೆರವೇರಿದೆ.
'ಮಫ್ತಿ' ಚಿತ್ರದ ಭೈರತಿ ರಣಗಲ್ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಈ ಪಾತ್ರವನ್ನು ತಮಿಳಿನಲ್ಲಿ ಯಾರು ನಿರ್ವಹಿಸಬಹುದು ಎನ್ನುವ ನಿರೀಕ್ಷೆ ಇತ್ತು. ಅಂದಹಾಗೆ, ಈ ಪಾತ್ರದಲ್ಲಿ ನಟ ಸಿಂಬು ಕಾಣಿಸಿಕೊಳ್ಳುತ್ತಿದ್ದಾರೆ.
ಟಾಲಿವುಡ್ ನಲ್ಲಿ ಮಫ್ತಿ: ಯಾರಾಗ್ತಾರೆ ಭೈರತಿ ರಣಗಲ್ಲು
ಕಾವೇರಿ ವಿಚಾರದಲ್ಲಿ ಕನ್ನಡಿಗರ ಮನ ಗೆದ್ದ ಈ ನಟ ಈಗ ಈ ಸಿನಿಮಾದ ನಾಯಕನಾಗಿದ್ದಾರೆ. 25 ದಿನಗಳ ಕಾಲ ಕಾಲ್ ಶೀಟ್ ನೀಡಿದ್ದು, ಅದರ ಒಳಗೆ ಸಿನಿಮಾದ ಅವರ ಭಾಗದ ಚಿತ್ರೀಕರಣ ಮುಗಿಯಲಿದೆ. ಶ್ರೀ ಮುರಳಿ ಪಾತ್ರದಲ್ಲಿ ಗೌತಮ್ ಕಾರ್ತಿಕ್ ನಟಿಸುತ್ತಿದ್ದಾರೆ. ಸಿಂಬು ಗ್ಯಾಂಗ್ ಸ್ಟರ್ ಹಾಗೂ ಗೌತಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಬಾಹುಬಲಿ ತಮಿಳು ಚಿತ್ರಕ್ಕೆ ಡೈಲಾಗ್ ಬರೆದಿದ್ದ ಮಾಧವನ್ ಕಾರ್ತಿ ಈ ಸಿನಿಮಾಗೂ ಸಂಭಾಷಣೆ ಬರೆದಿದ್ದಾರೆ. ವಿಶೇಷ ಅಂದರೆ, ಕನ್ನಡದ ನಿರ್ದೇಶಕ ನರ್ತನ್ ಅವರೇ ಅಲ್ಲಿಯೂ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡದಲ್ಲಿ ಈ ಸಿನಿಮಾ ಸೂಪರ್ ಹಿಟ್ ಆಗಿದ್ದು, ಈಗ ತಮಿಳಿನಲ್ಲಿ ಸಿನಿಮಾ ಬರುತ್ತಿದೆ. ಕಾಲಿವುಡ್ ನಲ್ಲಿ ಚಿತ್ರ ಗೆಲ್ಲುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.