Don't Miss!
- News ಪಟ್ಟು ಬಿಡದೆ ನಾಮಪತ್ರ ಸಲ್ಲಿಸಿದ ಕೆಎಸ್ ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿನಲ್ಲಿ 'ಮಫ್ತಿ' : ಭೈರತಿ ರಣಗಲ್ ಆದ ಸಿಂಬು
ಕನ್ನಡದ ಸೂಪರ್ ಹಿಟ್ ಸಿನಿಮಾ 'ಮಫ್ತಿ' ಈಗ ತಮಿಳಿನಲ್ಲಿ ರಿಮೇಕ್ ಆಗುತ್ತಿದೆ. ಈ ಚಿತ್ರದ ಪೂಜಾ ಕಾರ್ಯಕ್ರಮ ಇತ್ತೀಚಿಗಷ್ಟೆ ನೆರವೇರಿದೆ.
'ಮಫ್ತಿ' ಚಿತ್ರದ ಭೈರತಿ ರಣಗಲ್ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದರು. ಈ ಪಾತ್ರವನ್ನು ತಮಿಳಿನಲ್ಲಿ ಯಾರು ನಿರ್ವಹಿಸಬಹುದು ಎನ್ನುವ ನಿರೀಕ್ಷೆ ಇತ್ತು. ಅಂದಹಾಗೆ, ಈ ಪಾತ್ರದಲ್ಲಿ ನಟ ಸಿಂಬು ಕಾಣಿಸಿಕೊಳ್ಳುತ್ತಿದ್ದಾರೆ.
ಟಾಲಿವುಡ್ ನಲ್ಲಿ ಮಫ್ತಿ: ಯಾರಾಗ್ತಾರೆ ಭೈರತಿ ರಣಗಲ್ಲು
ಕಾವೇರಿ ವಿಚಾರದಲ್ಲಿ ಕನ್ನಡಿಗರ ಮನ ಗೆದ್ದ ಈ ನಟ ಈಗ ಈ ಸಿನಿಮಾದ ನಾಯಕನಾಗಿದ್ದಾರೆ. 25 ದಿನಗಳ ಕಾಲ ಕಾಲ್ ಶೀಟ್ ನೀಡಿದ್ದು, ಅದರ ಒಳಗೆ ಸಿನಿಮಾದ ಅವರ ಭಾಗದ ಚಿತ್ರೀಕರಣ ಮುಗಿಯಲಿದೆ. ಶ್ರೀ ಮುರಳಿ ಪಾತ್ರದಲ್ಲಿ ಗೌತಮ್ ಕಾರ್ತಿಕ್ ನಟಿಸುತ್ತಿದ್ದಾರೆ. ಸಿಂಬು ಗ್ಯಾಂಗ್ ಸ್ಟರ್ ಹಾಗೂ ಗೌತಮ್ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಬಾಹುಬಲಿ ತಮಿಳು ಚಿತ್ರಕ್ಕೆ ಡೈಲಾಗ್ ಬರೆದಿದ್ದ ಮಾಧವನ್ ಕಾರ್ತಿ ಈ ಸಿನಿಮಾಗೂ ಸಂಭಾಷಣೆ ಬರೆದಿದ್ದಾರೆ. ವಿಶೇಷ ಅಂದರೆ, ಕನ್ನಡದ ನಿರ್ದೇಶಕ ನರ್ತನ್ ಅವರೇ ಅಲ್ಲಿಯೂ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡದಲ್ಲಿ ಈ ಸಿನಿಮಾ ಸೂಪರ್ ಹಿಟ್ ಆಗಿದ್ದು, ಈಗ ತಮಿಳಿನಲ್ಲಿ ಸಿನಿಮಾ ಬರುತ್ತಿದೆ. ಕಾಲಿವುಡ್ ನಲ್ಲಿ ಚಿತ್ರ ಗೆಲ್ಲುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.