Don't Miss!
- Finance ಲಕ್ಷ ಲಕ್ಷ ಕೋಟಿ ಇದ್ದರೂ ಇದೊಂದು ಕೊರತೆ ಈ ಶ್ರೀಮಂತನಿಗೆ ಕಾಡಿತ್ತು!
- Automobiles 28 ಲಕ್ಷದ ಬೈಕನ್ನು ಲೀಲಾಜಾಲವಾಗಿ ಓಡಿಸಿದ ಲೇಡಿ ಸೂಪರ್ಸ್ಟಾರ್: ಇಂತಹ ಗರ್ಲ್ಫ್ರೆಂಡ್ ಬೇಕೆಂದ ನೆಟ್ಟಿಗರು!
- Technology Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- News ಹನುಮಾನ್ ಚಾಲೀಸಾ ಗಲಾಟೆ: ತೇಜಸ್ವಿ ಸೂರ್ಯನಿಂದ ದ್ವೇಷ ಹರಡುವ ಯತ್ನ- ದಿನೇಶ್ ಗುಂಡೂರಾವ್
- Sports BCCI Central Contract: ಶ್ರೇಯಸ್, ಇಶಾನ್ ಕಡೆಗಣನೆ: ಯುವ ಆಟಗಾರರಿಗೆ ಮಣೆ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಬು ಬೆಂಗಳೂರಿಗೆ ಬರ್ತಾರೆ, ಶಿವಣ್ಣನನ್ನು ಭೇಟಿ ಮಾಡ್ತಾರೆ
ಸಿಂಬು ಈಗ ತಮಿಳಿನ ಒಬ್ಬ ನಟನಾಗಿ ಮಾತ್ರ ಸೀಮಿತವಾಗಿಲ್ಲ, ಅವರು ಕನ್ನಡಿಗರ ಪ್ರೀತಿ ಪಡೆದ ನಟನಾಗಿದ್ದಾರೆ. ಕಾವೇರಿ ವಿಚಾರದಲ್ಲಿ ತನ್ನ ಹೇಳಿಕೆ ಮೂಲಕ ಎಲ್ಲರಿಗೆ ಇಷ್ಟ ಆದ ಈ ನಟ ಈಗ ಬೆಂಗಳೂರಿಗೆ ಬರುತ್ತಿದ್ದಾರೆ.
ಸಿಂಬು ಬೆಂಗಳೂರಿಗೆ ಬರುತ್ತಿರುವುದಕ್ಕೂ ಒಂದು ಕಾರಣ ಇದೆ. ಸಿಂಬು ಇತ್ತೀಚಿಗಷ್ಟೆ 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾದ ಒಂದು ಹಾಡು ಹಾಡಿದ್ದರು. ಇದು ಅವರ ಮೊದಲ ಕನ್ನಡ ಹಾಡಾಗಿತ್ತು. ಈ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಇದೇ ತಿಂಗಳ 25ಕ್ಕೆ ನಡೆಯಲಿದೆ. ವಿಶೇಷ ಅಂದರೆ ಸಿಂಬು ಅವರೇ ಚಿತ್ರದ ಆಡಿಯೋ ರಿಲೀಸ್ ಮಾಡಲಿದ್ದಾರೆ.
ಸಿಂಬು ಜೊತೆಗೆ ಸೆಂಚುರಿ ಸ್ಟಾರ್ ಶಿವಣ್ಣ ಹಾಗೂ ಧ್ರುವ ಸರ್ಜಾ ಕೂಡ ಕಾರ್ಯಕ್ರಮದ ಅತಿಥಿ ಆಗಲಿದ್ದಾರೆ. ಸಿಂಬು ಈ ಕಾರ್ಯಕ್ರಮದಲ್ಲಿ ಶಿವಣ್ಣನನ್ನು ಭೇಟಿ ಮಾಡಲಿದ್ದಾರೆ. ಇನ್ನು 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಚಿತ್ರಕ್ಕೆ ನಟಿ ಮೇಘನಾ ರಾಜ್ ನಾಯಕಿ ಆಗಿದ್ದಾರೆ. ಅಲ್ಲದೆ ಮೇಘನಾ ನನ್ನ ಕೆರಿಯರ್ ನಲ್ಲಿ ಬಂದಿರುವ ಬೆಸ್ಟ್ ಸಿನಿಮಾ ಇದು ಅಂತ ಹೇಳಿಕೊಂಡಿದ್ದಾರೆ.
Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ. ಕಾಂತ ಕನ್ನಲಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಮೇಘನಾ ಜೊತೆಗೆ ತಿಲಕ್ ಸಿನಿಮಾದಲ್ಲಿ ನಟಿಸಿದ್ದಾರೆ.