twitter
    For Quick Alerts
    ALLOW NOTIFICATIONS  
    For Daily Alerts

    ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಸಂತಾಪ

    |

    Recommended Video

    Girish Karnad : ಕನ್ನಡ ಚಿತ್ರರಂಗಕ್ಕೆ ಅನೇಕ ಕೊಡುಗೆ ಕೊಟ್ಟಿದ್ದರು ಕಾರ್ನಾಡರು..!

    ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಇನ್ನಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

    ಗಿರೀಶ್ ಕಾರ್ನಾಡ್ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರ್ದೇಶಕರಾದ ಸಿಂಪಲ್ ಸುನಿ ಮತ್ತು ಪವನ್ ಒಡೆಯರ್ ಅಗಲಿದ ಕಾರ್ನಾಡ್ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

    "ಜ್ಞಾನಪೀಠ ಪ್ರಶಸ್ತಿ ವಿಜೇತರು. ಚಿಂತಕರು, ನಾಟಕಕಾರ, ನಿರ್ದೇಶಕರು, ನಟರಾದ ಗಿರೀಶ್ ಕಾರ್ನಾಡ್ ರವರು ಇಂದ ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿಸಿಗಲೆಂದು ಪ್ರಾರ್ಥಿಸೋಣ" ಸಿಂಪಲ್ ಸುನಿ ಟ್ವೀಟ್ ಮಾಡಿದ್ದಾರೆ.

    Simple Suni and Pawan Wodeyar condolence for Senior actor and Director Girish Karnad

    ಇನ್ನು ಪವನ್ ಒಡೆಯರ್ ನಿರ್ದೇಶನದ ರಣ ವಿಕ್ರಮ ಸಿನಿಮಾದಲ್ಲಿ ಗಿರೀಶ್ ಕಾರ್ನಾಡ್ ಅವರು ಪ್ರಮುಕ ಪಾತ್ರದಲ್ಲಿ ಮಿಂಚಿದ್ದರು. ಕಾರ್ನಾಡ್ ಅರ ನಿಧನದ ಸುದ್ದಿ ನಂಬಲಿಕ್ಕೆ ಅಸಾಧ್ಯ ಎಂದು ಪವನ್ ಹೇಳಿದ್ದಾರೆ.

    "ಗಿರೀಶ್ ಕಾರ್ನಾಡ್ ಇನ್ನಿಲ್ಲ ಎನ್ನುವುದನ್ನು ನಂಬಲಿಕ್ಕೆ ಅಸಾಧ್ಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕರ್ನಾಟಕ ಸಾಹಿತ್ಯ ಲೋಕಕ್ಕೆ ದೊಡ್ಡ ನಷ್ಟವಾಗಿದೆ" ಎಂದು ಹೇಳಿದ್ದಾರೆ.

    Simple Suni and Pawan Wodeyar condolence for Senior actor and Director Girish Karnad

    ಗಿರೀಶ್ ಕಾರ್ನಾಡ್ ಕೊನೆಯದಾಗಿ ಸಲ್ಮಾನ್ ಖಾನ್ ಅಭಿನಯದ 'ಟೈಗರ್ ಜಿಂದಾ ಹೈ' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.

    English summary
    Simple Suni and Pawan Wodeyar condolence for Senior actor and Director Girish Karnad. Actor, Director Girish Karnad passes away today.
    Monday, June 10, 2019, 10:23
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X