Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಹೋರಾಟ ಬೆಂಬಲಿಸಿದ ನಿರ್ದೇಶಕ ಸುನಿ, ವಿನೋದ್ ಪ್ರಭಾಕರ್
ಕೃಷಿ ಸಂಬಂಧಿತ ಕಾಯ್ದೆಗಳನ್ನು ವಿರೋಧಿಸಿ ರೈತರು, ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ಮಾಡಿವೆ. ರಾಜ್ಯಾದ್ಯಂತ ರಸ್ತೆಗಿಳಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ರೈತರ ಹೋರಾಟಕ್ಕೆ ಕನ್ನಡ ಚಲನಚಿತ್ರ ನಿರ್ದೇಶಕ ಸುನಿ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುನಿ ''ಕೃಷಿ ಮಾಡಿ ರಾಜಕೀಯಕ್ಕೆ ಬಂದವರೆಂದು ಹೇಳುವವರೆ, ದಯವಿಟ್ಟು ಕೃಷಿಯಲ್ಲಿ ರಾಜಕೀಯ ಮಾಡಬೇಡಿ. ರೈತರಿಗಾಗಿ ಮಸೂದೆ, ಅಂದರೆ ಅವರ ಧಿಕ್ಕಾರ ಏತಕ್ಕೆ? ಅವರನ್ನೇ ಕರೆತನ್ನಿ ..ಮಾರ್ಪಾಡಿಸಿ'' ಎಂದು ಮನವಿ ಮಾಡಿದ್ದಾರೆ.
ರೈತರನ್ನು ಕೆರಳಿಸಿದ ಕೃಷಿ ಮಸೂದೆ ಮತ್ತು ರಾಜ್ಯಗಳ ವಿರೋಧದ ವಿವರ
''ಒಬ್ಬ ರೈತನಿಗೆ ಕಾರ್ಪೋರೇಟ್ ಕಂಪನಿ ಒಳಗೆ ನೇರವಾಗಿ ಹೋಗಲು ಸಾಧ್ಯವಿಲ್ಲವಾದರೆ, ಕಾರ್ಪೋರೇಟ್ ರವರಿಗೂ ಕೃಷಿಭೂಮಿಗೆ ಬರಲು ಮಾನದಂಡಗಳು ಬೇಕಲ್ಲವೆ..'' ಎಂದು ಪ್ರಶ್ನಿಸಿದ್ದಾರೆ.
ಸುನಿ ಅವರ ಈ ಟ್ವೀಟ್ ಕುರಿತು ನೆಟ್ಟಿಗರು ಸಹ ಪರ-ವಿರೋಧ ಚರ್ಚೆ ಮಾಡುತ್ತಿದ್ದಾರೆ. ಇನ್ನು ನಟ ವಿನೋದ್ ಪ್ರಭಾಕರ್ ಸಹ ರೈತರ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ''ರೈತರ ಜೊತೆ ನಿಲ್ಲೋಣ, ಅನ್ನದಾತರ ಋಣ ತೀರಿಸೋಣ'' ಎಂದು ಫೇಸ್ಬುಕ್ನಲ್ಲಿ ಬೆಂಬಲ ಸೂಚಿಸಿದ್ದಾರೆ.
Recommended Video
'ಆ ದಿನಗಳು' ಖ್ಯಾತಿಯ ನಟ ಚೇತನ್ ಅವರು ರೈತರು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿ, ಅವರ ಜೊತೆ ಹೋರಾಟದಲ್ಲಿ ಸಹ ಭಾಗಿಯಾಗಿದ್ದಾರೆ.