Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಮಕ್ ಕೊಟ್ಟ ನಂತರ 'ಬಜಾರ್'ಗೆ ಬಂದ ಸಿಂಪಲ್ ಸುನಿ
ಸ್ಯಾಂಡಲ್ ವುಡ್ ಗೆ ವೆರೈಟಿ ಸಿನಿಮಾಗಳನ್ನ ಕೊಟ್ಟಿರುವ ನಿರ್ದೇಶಕ ಸುನಿ ಚಮಕ್ ಚಿತ್ರದ ಬಳಿಕ ಹೊಸ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಹೊಸ ನಾಯಕ ನಟನನ್ನ ಚಿತ್ರರಂಗಕ್ಕೆ ಪರಿಚಯಿಸಲು ಸಿಂಪಲ್ ಸುನಿ ಯೋಜನೆ ಹಾಕಿಕೊಂಡಿದ್ದಾರೆ.
ಸುನಿ ತಮ್ಮ ಮುಂದಿನ ಚಿತ್ರಕ್ಕೆ ಬಜಾರ್ ಎಂದು ಟೈಟಲ್ ಫಿಕ್ಸ್ ಮಾಡಿದ್ದು ಧನ್ವೀರ್ ಗೌಡ ಎನ್ನುವ ಪ್ರತಿಭೆಯನ್ನ ಈ ಮೂಲಕ ಸಿನಿಮಾರಂಗಕ್ಕೆ ನಾಯಕನಾಗಿ ಇಂಟ್ರಡ್ಯೂಸ್ ಮಾಡಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ಪಾರಿವಾಳ ಜೂಜಾಟ ಹಾಗೂ ಸ್ಪರ್ಧೆಯ ಬಗ್ಗೆ ಸಿನಿಮಾ ಕಥೆಯನ್ನ ಮಾಡಿಕೊಂಡಿದ್ದಾರಂತೆ ನಿರ್ದೇಶಕ ಸುನಿ.
ರವಿ ಬಸ್ರೂರ್ ಬಜಾರ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದು ಸಂತೋಷ್ ರೈ ಪಾತಾಜೆ ಚಿತ್ರಕ್ಕೆ ಕ್ಯಾಮೆರಾ ವರ್ಕ್ ಮಾಡಲಿದ್ದಾರೆ. ಮೂಲಗಳ ಪ್ರಕಾರ ಬಜಾರ್ ಚಿತ್ರ ಸಂಕ್ರಾಂತಿ ಹಬ್ಬದಂದು ಸೆಟ್ಟೇರಲಿದೆ.
ಧೈರ್ಯಂ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಅದಿತಿ ಪ್ರಭುದೇವ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರಂತೆ. ಈ ಬಗ್ಗೆ ಅಧಿತಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.
ಬಜಾರ್ ಟೈಟಲ್ ಮಾಸ್ ಫೀಲ್ ನೀಡುತ್ತಿದ್ದು, ಚಮಕ್ ಸಿನಿಮಾ ಮೂಲಕ ಎಮೋಷನಲ್ ಕಥೆಯನ್ನ ಪ್ರಯೋಗ ಮಾಡಿದ್ದ ಸುನಿ ಬಜಾರ್ ಚಿತ್ರ ನಿರ್ದೇಶನ ಮಾಡಿ ಮಾಸ್ ಸಿನಿಮಾಗಳನ್ನೂ ನಿರ್ದೇಶನ ಮಾಡಬಲ್ಲರು ಎಂದು ನಿರೂಪಿಸಲಿದ್ದಾರೆ.