Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರು ಕೊಟ್ಟಿದ್ದ ಚೆಕ್ ಬೌನ್ಸ್: ಕೋರ್ಟ್ ಮೆಟ್ಟಿಲೇರಿದ ನಟಿ ಸಿಂಧು ಲೋಕನಾಥ್
ಮೂರು ವರ್ಷಗಳ ನಂತರ ನಟಿ ಸಿಂಧು ಲೋಕನಾಥ್ ಬಣ್ಣ ಹಚ್ಚಿದ್ದು 'ಹೀಗೊಂದು ದಿನ' ಚಿತ್ರಕ್ಕಾಗಿ. ಮದುವೆ ಆದ ಬಳಿಕ ಬಿಡುಗಡೆ ಆದ ಸಿಂಧು ಲೋಕನಾಥ್ ರವರ ಮೊದಲ ಸಿನಿಮಾ 'ಹೀಗೊಂದು ದಿನ'.
'ಹೀಗೊಂದು ದಿನ' ಮಹಿಳಾ ಪ್ರಧಾನ ಚಿತ್ರವಾಗಿದ್ದು, ಇದರಲ್ಲಿ ಸಿಂಧು ಲೋಕನಾಥ್ ಜಾನವಿ ಎಂಬ ಹುಡುಗಿಯ ಪಾತ್ರ ನಿರ್ವಹಿಸಿದ್ದರು. 'ಅನ್ ಕಟ್' ಸಿನಿಮಾ ಬೇರೆ ಆಗಿದ್ದರಿಂದ, ಇದಕ್ಕಾಗಿ ಪೂರ್ವ ತಯಾರಿ ಕೂಡ ಮಾಡಿಕೊಂಡಿದ್ದರು.
ಸಂದರ್ಶನ: 'ಹೀಗೊಂದು ದಿನ'ದಲ್ಲಿ 'ರೆಬೆಲ್' ಆದ ಸಿಂಧು ಲೋಕನಾಥ್
ವಿಕ್ರಂ ಯೋಗಾನಂದ್ ನಿರ್ದೇಶನ ಮಾಡಿದ ಪ್ರಯೋಗಾತ್ಮಕ ಚಿತ್ರವಾಗಿದ್ದ 'ಹೀಗೊಂದು ದಿನ' ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಲಿಲ್ಲ. ಹಾಗೇ, ನಾಯಕಿ ಸಿಂಧು ಲೋಕನಾಥ್ ಗೆ ಬರಬೇಕಿದ್ದ ಸಂಭಾವನೆ ಕೂಡ ಬಂದಿಲ್ಲ.
ಹೌದು, ನಟಿ ಸಿಂಧು ಲೋಕನಾಥ್ ಗೆ ಕೊಡಬೇಕಿದ್ದ ಸಂಭಾವನೆಯಲ್ಲಿ ನಿರ್ಮಾಪಕರು ಎರಡು ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿದ್ದರು. ಅದಕ್ಕಾಗಿ ಚೆಕ್ ಕೊಟ್ಟಿದ್ದರು. ಆದ್ರೆ, ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಕೊಟ್ಟಿದ್ದ ಎರಡು ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದೆ.
ಹೀಗಾಗಿ, 'ಹೀಗೊಂದು ದಿನ' ನಿರ್ಮಾಪಕರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿ, ಕೋರ್ಟ್ ಮೆಟ್ಟಿಲೇರಿದ್ದಾರೆ ನಟಿ ಸಿಂಧು ಲೋಕನಾಥ್.