Just In
- 38 min ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
- 1 hr ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 2 hrs ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 3 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
Don't Miss!
- News
ಪತ್ರ ಬರೆದಿಟ್ಟು ಅಭಿಮಾನಿ ಆತ್ಮಹತ್ಯೆ; ಅಂತ್ಯ ಸಂಸ್ಕಾರಕ್ಕೆ ಬಂದ ಎಚ್ಡಿಕೆ
- Sports
ಭಾರತ vs ಆಸ್ಟ್ರೇಲಿಯಾ: ಬ್ರಿಸ್ಬೇನ್ನಲ್ಲಿ ವಾಖಲೆಯ ಜೊತೆಯಾಟವಾಡಿದ ಶಾರ್ದೂಲ್- ಸುಂದರ್
- Finance
ಈ 6 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ 1,13,018.94 ಕೋಟಿ ರು. ಹೆಚ್ಚಳ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಕೃಷ್ಣ ಟಾಕೀಸ್' ಓನರ್ ಆದ ಸಿಂಧು ಲೋಕನಾಥ್
ನಟಿ ಸಿಂಧು ಲೋಕನಾಥ್ ವೈವಾಹಿಕ ಜೀವನದ ಬಗ್ಗೆ ಕೆಲವು ಗಾಸಿಪ್ ಗಳು ಹರಿದಾಡಿದ್ದವು. ಅದೇನೇ ಇದ್ದರೂ ಈಗ ಅವರು ಹೊಸ ಸಿನಿಮಾ ಶುರು ಮಾಡಿದ್ದಾರೆ.
'ಕೃಷ್ಣ ಟಾಕೀಸ್' ಎಂಬ ಸಿನಿಮಾದಲ್ಲಿ ಸಿಂಧು ಲೋಕನಾಥ್ ನಾಯಕಿಯಾಗಿದ್ದಾರೆ. ಇದು ಕೃಷ್ಣ ಅಜಯ್ ರಾವ್ ನಟನೆಯ ಹೊಸ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಅಪೂರ್ವ ಹಾಗೂ ಸಿಂಧು ತೆರೆ ಹಂಚಿಕೊಳ್ಳಲಿದ್ದಾರೆ.
ಹುಟ್ಟುಹಬ್ಬಕ್ಕೆ ಕೃಷ್ಣ ಅಜಯ್ ರಾವ್ ಹೊಸ ಸಿನಿಮಾ
ಈ ಹಿಂದೆ ಅಜಯ್ ರಾವ್ ಹಾಗೂ ಸಿಂಧು ಲೋಕನಾಥ್ 'ಜೈ ಭಜರಂಗ ಬಲಿ' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈಗ ಮತ್ತೆ ಈ ಜೋಡಿ ಸಿನಿಮಾ ಮಾಡುತ್ತಿದ್ದಾರೆ.
ಅಜಯ್ ಕೆರಿಯರ್ ನಲ್ಲಿ ಕೃಷ್ಣ ಸೀರಿಸ್ ಮತ್ತೆ ಈ ಚಿತ್ರದ ಮೂಲಕವೂ ಮುಂದುವರೆದಿದೆ. ಈ ಸಿನಿಮಾದ ಮುಹೂರ್ತ ಇಂದು ನೆಲಮಂಗಲದ ಬಳಿ ನೆರವೇರಿದೆ. ಆನಂದ್ ಪ್ರಿಯಾ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಜಯಾನಂದ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
ಶ್ರೀಧರ್ ಸಂಭ್ರಮ್ ಮ್ಯೂಸಿಕ್ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಗೋಕುಲ ಎಂಟಟೈನರ್ಸ್ ಬ್ಯಾನರ್ ನಲ್ಲಿ ಅಜಯ್ ಹೊಸ ಸಿನಿಮಾವನ್ನು ಮಾಡುತ್ತಿದ್ದಾರೆ. ಗೋವಿಂದ ರಾಜು ಎ ಹೆಚ್ ಹಾಗೂ ಕೃಷ್ಣಮೂರ್ತಿ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.
'ಇರುವುದೆಲ್ಲವ ಬಿಟ್ಟು' ಹಾಗೂ 'ರಂಗಿತರಂಗ' ಚಿತ್ರಗಳಿಗೆ ಕೆಲಸ ಮಾಡಿದ್ದ ವಿಲಿಯಂ ಡೇವಿಡ್ ಈ ಸಿನಿಮಾದ ಛಾಯಾಗ್ರಾಹಕರಾಗಿದ್ದಾರೆ.