Don't Miss!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Automobiles Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೃಷ್ಣ ಟಾಕೀಸ್' ಓನರ್ ಆದ ಸಿಂಧು ಲೋಕನಾಥ್
ನಟಿ ಸಿಂಧು ಲೋಕನಾಥ್ ವೈವಾಹಿಕ ಜೀವನದ ಬಗ್ಗೆ ಕೆಲವು ಗಾಸಿಪ್ ಗಳು ಹರಿದಾಡಿದ್ದವು. ಅದೇನೇ ಇದ್ದರೂ ಈಗ ಅವರು ಹೊಸ ಸಿನಿಮಾ ಶುರು ಮಾಡಿದ್ದಾರೆ.
'ಕೃಷ್ಣ ಟಾಕೀಸ್' ಎಂಬ ಸಿನಿಮಾದಲ್ಲಿ ಸಿಂಧು ಲೋಕನಾಥ್ ನಾಯಕಿಯಾಗಿದ್ದಾರೆ. ಇದು ಕೃಷ್ಣ ಅಜಯ್ ರಾವ್ ನಟನೆಯ ಹೊಸ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಅಪೂರ್ವ ಹಾಗೂ ಸಿಂಧು ತೆರೆ ಹಂಚಿಕೊಳ್ಳಲಿದ್ದಾರೆ.
ಹುಟ್ಟುಹಬ್ಬಕ್ಕೆ ಕೃಷ್ಣ ಅಜಯ್ ರಾವ್ ಹೊಸ ಸಿನಿಮಾ
ಈ ಹಿಂದೆ ಅಜಯ್ ರಾವ್ ಹಾಗೂ ಸಿಂಧು ಲೋಕನಾಥ್ 'ಜೈ ಭಜರಂಗ ಬಲಿ' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈಗ ಮತ್ತೆ ಈ ಜೋಡಿ ಸಿನಿಮಾ ಮಾಡುತ್ತಿದ್ದಾರೆ.
ಅಜಯ್ ಕೆರಿಯರ್ ನಲ್ಲಿ ಕೃಷ್ಣ ಸೀರಿಸ್ ಮತ್ತೆ ಈ ಚಿತ್ರದ ಮೂಲಕವೂ ಮುಂದುವರೆದಿದೆ. ಈ ಸಿನಿಮಾದ ಮುಹೂರ್ತ ಇಂದು ನೆಲಮಂಗಲದ ಬಳಿ ನೆರವೇರಿದೆ. ಆನಂದ್ ಪ್ರಿಯಾ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಜಯಾನಂದ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
ಶ್ರೀಧರ್ ಸಂಭ್ರಮ್ ಮ್ಯೂಸಿಕ್ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಗೋಕುಲ ಎಂಟಟೈನರ್ಸ್ ಬ್ಯಾನರ್ ನಲ್ಲಿ ಅಜಯ್ ಹೊಸ ಸಿನಿಮಾವನ್ನು ಮಾಡುತ್ತಿದ್ದಾರೆ. ಗೋವಿಂದ ರಾಜು ಎ ಹೆಚ್ ಹಾಗೂ ಕೃಷ್ಣಮೂರ್ತಿ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.
'ಇರುವುದೆಲ್ಲವ ಬಿಟ್ಟು' ಹಾಗೂ 'ರಂಗಿತರಂಗ' ಚಿತ್ರಗಳಿಗೆ ಕೆಲಸ ಮಾಡಿದ್ದ ವಿಲಿಯಂ ಡೇವಿಡ್ ಈ ಸಿನಿಮಾದ ಛಾಯಾಗ್ರಾಹಕರಾಗಿದ್ದಾರೆ.