Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೃಷ್ಣ ಟಾಕೀಸ್' ಓನರ್ ಆದ ಸಿಂಧು ಲೋಕನಾಥ್
ನಟಿ ಸಿಂಧು ಲೋಕನಾಥ್ ವೈವಾಹಿಕ ಜೀವನದ ಬಗ್ಗೆ ಕೆಲವು ಗಾಸಿಪ್ ಗಳು ಹರಿದಾಡಿದ್ದವು. ಅದೇನೇ ಇದ್ದರೂ ಈಗ ಅವರು ಹೊಸ ಸಿನಿಮಾ ಶುರು ಮಾಡಿದ್ದಾರೆ.
'ಕೃಷ್ಣ ಟಾಕೀಸ್' ಎಂಬ ಸಿನಿಮಾದಲ್ಲಿ ಸಿಂಧು ಲೋಕನಾಥ್ ನಾಯಕಿಯಾಗಿದ್ದಾರೆ. ಇದು ಕೃಷ್ಣ ಅಜಯ್ ರಾವ್ ನಟನೆಯ ಹೊಸ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಅಪೂರ್ವ ಹಾಗೂ ಸಿಂಧು ತೆರೆ ಹಂಚಿಕೊಳ್ಳಲಿದ್ದಾರೆ.
ಹುಟ್ಟುಹಬ್ಬಕ್ಕೆ ಕೃಷ್ಣ ಅಜಯ್ ರಾವ್ ಹೊಸ ಸಿನಿಮಾ
ಈ ಹಿಂದೆ ಅಜಯ್ ರಾವ್ ಹಾಗೂ ಸಿಂಧು ಲೋಕನಾಥ್ 'ಜೈ ಭಜರಂಗ ಬಲಿ' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈಗ ಮತ್ತೆ ಈ ಜೋಡಿ ಸಿನಿಮಾ ಮಾಡುತ್ತಿದ್ದಾರೆ.
ಅಜಯ್ ಕೆರಿಯರ್ ನಲ್ಲಿ ಕೃಷ್ಣ ಸೀರಿಸ್ ಮತ್ತೆ ಈ ಚಿತ್ರದ ಮೂಲಕವೂ ಮುಂದುವರೆದಿದೆ. ಈ ಸಿನಿಮಾದ ಮುಹೂರ್ತ ಇಂದು ನೆಲಮಂಗಲದ ಬಳಿ ನೆರವೇರಿದೆ. ಆನಂದ್ ಪ್ರಿಯಾ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಅವರು ವಿಜಯಾನಂದ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
ಶ್ರೀಧರ್ ಸಂಭ್ರಮ್ ಮ್ಯೂಸಿಕ್ ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಗೋಕುಲ ಎಂಟಟೈನರ್ಸ್ ಬ್ಯಾನರ್ ನಲ್ಲಿ ಅಜಯ್ ಹೊಸ ಸಿನಿಮಾವನ್ನು ಮಾಡುತ್ತಿದ್ದಾರೆ. ಗೋವಿಂದ ರಾಜು ಎ ಹೆಚ್ ಹಾಗೂ ಕೃಷ್ಣಮೂರ್ತಿ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.
'ಇರುವುದೆಲ್ಲವ ಬಿಟ್ಟು' ಹಾಗೂ 'ರಂಗಿತರಂಗ' ಚಿತ್ರಗಳಿಗೆ ಕೆಲಸ ಮಾಡಿದ್ದ ವಿಲಿಯಂ ಡೇವಿಡ್ ಈ ಸಿನಿಮಾದ ಛಾಯಾಗ್ರಾಹಕರಾಗಿದ್ದಾರೆ.