Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಈಗ ಗುಪ್ತಚರ ಅಧಿಕಾರಿ
ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್ ಈಗ ಮತ್ತೊಂದು ಸಾಧನೆ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಘು ದೀಕ್ಷಿತ್ ಈಗ ಗುಪ್ತಚರ ಅಧಿಕಾರಿಯಾಗಿದ್ದಾರೆ. ಅಚ್ಚರಿ ಪಡಬೇಡಿ ರಘು ದೀಕ್ಷಿತ್ ನಟನೆಗೆ ಇಳಿದಿದ್ದಾರೆ. ಮೊದಲ ಬಾರಿಗೆ ಬಣ್ಣ ಹಚ್ಚುವ ಮೂಲಕ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.
ಅಂದ್ಹಾಗೆ ರಘು ದೀಕ್ಷಿತ್ 'ಗರುಡ' ಚಿತ್ರದ ಮೂಲಕ ನಟನಾಗಿ ಎಂಟ್ರಿ ಕೊಡುತ್ತಿದ್ದಾರೆ. ಚಿತ್ರದಲ್ಲಿ ರಘು ಗುಪ್ತಚರ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ವಿಶೇಷ ಅಂದ್ರೆ ಈ ಪಾತ್ರಕ್ಕೆ ರಾಷ್ಟ್ರೀಯ ಭದ್ರತಾ ಸಲಹೇಗಾರ ಅಜಿತ್ ದೋವಲ್ ಅವರೆ ಸ್ಫೂರ್ತಿ ಅಂತೆ.
ವಿಚ್ಛೇದನ, ಲೈಂಗಿಕ ದೌರ್ಜನ್ಯದ ಬಗ್ಗೆ ರಘು ದೀಕ್ಷಿತ್ ಪತ್ನಿ ಮಯೂರಿ ಟ್ವೀಟ್!
ಪಾತ್ರದ ಬಗ್ಗೆ ಹೆಚ್ಚೇನು ಬಿಟ್ಟಕೊಡದ ಚಿತ್ರತಂಡ ರಘು ಬಣ್ಣ ಹಚ್ಚಿರುವ ಕೆಲವು ಫೋಟೋಗಳನ್ನು ಸಾಮಾಜಿಕಾ ಜಾಲತಾಣದಲ್ಲಿ ಹರಿಬಿಟ್ಟಿದೆ. ಈಗಾಗಲೆ ಚಿತ್ರೀಕರಣ ಮುಗಿಸಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. 'ಗರುಡ' ಧನುಕುಮಾರ್ ನಿರ್ದೇಶನದ ಸಿನಿಮಾ.
'ಸಿಪಾಯಿ' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮಹೇಶ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಮಹೇಶ್ ಗೆ ಇಲ್ಲಿ ಇಬ್ಬರು ನಾಯಕಿಯರು. ಐಂದ್ರಿತಾ ರೇ ಮತ್ತು ಆಶಿಕಾ ರಂಗನಾಥ್, ವಿಶೇಷ ಅಂದ್ರೆ ರಘು ದೀಕ್ಷಿತ್ ಚಿತ್ರದಲ್ಲಿ ನಟನೆ ಜೊತೆಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ 'ಗರುಡ' ಸದ್ಯದಲ್ಲೆ ತೆರೆಗೆ ಬರಲಿದೆ.