Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮರೆಯಾದ ಗಾನ ಚೈತನ್ಯ ಎಲ್.ಎನ್.ಶಾಸ್ತ್ರಿ
ಹಲವು ತಿಂಗಳಿನಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಗಾಯಕ ಎನ್.ಎಲ್. ಶಾಸ್ತ್ರಿಯವರು ಇಹಲೋಕ ತ್ಯಜಿಸಿದ್ದಾರೆ. ತಮ್ಮ ವಿಶಿಷ್ಟ ಕಂಠದಿಂದಲೇ ಸಂಗೀತ ಪ್ರಿಯರಲ್ಲಿ ಮನೆ ಮಾಡಿದ್ದ ಎಲ್.ಎನ್.ಶಾಸ್ತ್ರಿ (ಚೈತನ್ಯ) ಅವರು ತಮ್ಮ ಸುಶ್ರಾವ್ಯ ಗೀತೆಗಳಿಂದಲ್ಲದೇ ಸಂಗೀತ ನಿರ್ದೇಶನದಿಂದಲೂ ತಮ್ಮದೇ ವರ್ಚಸ್ಸನ್ನು ರೂಪಿಸಿಕೊಂಡಿದ್ದರು.
Recommended Video
1996ರಲ್ಲಿ ತೆರೆಕಂಡ ಕಾಶೀನಾಥ್ ಅಭಿನಯದ 'ಅಜಗಜಾಂತರ' ಚಿತ್ರದಿಂದ ತಮ್ಮ ಸಂಗೀತ ಪಯಣವನ್ನು ಆರಂಭಿಸಿದ ಶಾಸ್ತ್ರಿಯವರು ಇದುವರೆಗೂ 3000 ಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವುದಲ್ಲದೆ 25 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತವನ್ನು ನೀಡಿದ್ದಾರೆ.
ಕನ್ನಡದ ಹೆಸರಾಂತ ಗಾಯಕ ಎಲ್ ಎನ್ ಶಾಸ್ತ್ರಿ ವಿಧಿವಶ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸಿ ಟಿ.ಎಸ್.ನಾಗಾಭರಣ ನಿರ್ದೇಶಿಸಿದ್ದ 'ಜನುಮದ ಜೋಡಿ' ಚಿತ್ರದ 'ಕೋಲುಮಂಡೆ ಜಂಗಮ ದೇವ..' ಗೀತೆಯಿಂದಲೇ ಇಂದಿಗೂ ಪ್ರಸಿದ್ಧಿ ಹೊಂದಿರುವ ಲ.ನಾ.ಶಾಸ್ತ್ರಿಗೆ ಆ ಗೀತೆಗಾಗಿ ರಾಜ್ಯ ಸರ್ಕಾರದಿಂದ ಶ್ರೇಷ್ಠ ಗಾಯಕ ಪ್ರಶಸ್ತಿಗೆ ಭಾಜನರಾದರು.
ನಾದಬ್ರಹ್ಮ ಹಂಸಲೇಖ ಹಾಗೂ ವಿ.ಮನೋಹರ್ ಅವರ ಬಳಿ ಶಿಷ್ಯ ವೃತ್ತಿಯನ್ನೂ ಮಾಡಿದ್ದ ಎಲ್.ಎನ್.ಶಾಸ್ತ್ರಿಯವರು 'ಕನಸಲ್ಲೂ ನೀನೇ ಮನಸಲ್ಲೂ ನೀನೇ' ಚಿತ್ರಕ್ಕೆ ಸಂಗೀತ ನೀಡುವ ಮೂಲಕ ಸ್ವಾತಂತ್ರ್ಯ ಸಂಗೀತ ನಿರ್ದೇಶಕರಾದರು.
'ರವಿಮಾಮ', 'ಆಂಟಿ ಪ್ರೀತ್ಸೆ', 'ಹಾಲು ಸಕ್ಕರೆ', 'ನಿನಗೋಸ್ಕರ', 'ಬಳ್ಳಾರಿ ನಾಗ', 'ಡೆಡ್ಲಿ -2', 'ಫ್ಲಾಪ್', 'ಮೆಲೋಡಿ' ಮುಂತಾದ ಗೀತೆಗಳಿಗೆ ಸಂಗೀತವನ್ನು ನೀಡಿದ್ದಾರೆ. ಎಲ್.ಎನ್.ಶಾಸ್ತ್ರಿಯವರ ನಿಧನಕ್ಕೆ ನಾದ ಬ್ರಹ್ಮ ಹಂಸಲೇಖ, ವಿ.ಮನೋಹರ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವರು ಸಂತಾಪವನ್ನು ಸೂಚಿಸಿದ್ದಾರೆ.