Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮರೆಯಾದ ಗಾನ ಚೈತನ್ಯ ಎಲ್.ಎನ್.ಶಾಸ್ತ್ರಿ
ಹಲವು ತಿಂಗಳಿನಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಗಾಯಕ ಎನ್.ಎಲ್. ಶಾಸ್ತ್ರಿಯವರು ಇಹಲೋಕ ತ್ಯಜಿಸಿದ್ದಾರೆ. ತಮ್ಮ ವಿಶಿಷ್ಟ ಕಂಠದಿಂದಲೇ ಸಂಗೀತ ಪ್ರಿಯರಲ್ಲಿ ಮನೆ ಮಾಡಿದ್ದ ಎಲ್.ಎನ್.ಶಾಸ್ತ್ರಿ (ಚೈತನ್ಯ) ಅವರು ತಮ್ಮ ಸುಶ್ರಾವ್ಯ ಗೀತೆಗಳಿಂದಲ್ಲದೇ ಸಂಗೀತ ನಿರ್ದೇಶನದಿಂದಲೂ ತಮ್ಮದೇ ವರ್ಚಸ್ಸನ್ನು ರೂಪಿಸಿಕೊಂಡಿದ್ದರು.
Recommended Video
1996ರಲ್ಲಿ ತೆರೆಕಂಡ ಕಾಶೀನಾಥ್ ಅಭಿನಯದ 'ಅಜಗಜಾಂತರ' ಚಿತ್ರದಿಂದ ತಮ್ಮ ಸಂಗೀತ ಪಯಣವನ್ನು ಆರಂಭಿಸಿದ ಶಾಸ್ತ್ರಿಯವರು ಇದುವರೆಗೂ 3000 ಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವುದಲ್ಲದೆ 25 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತವನ್ನು ನೀಡಿದ್ದಾರೆ.
ಕನ್ನಡದ ಹೆಸರಾಂತ ಗಾಯಕ ಎಲ್ ಎನ್ ಶಾಸ್ತ್ರಿ ವಿಧಿವಶ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸಿ ಟಿ.ಎಸ್.ನಾಗಾಭರಣ ನಿರ್ದೇಶಿಸಿದ್ದ 'ಜನುಮದ ಜೋಡಿ' ಚಿತ್ರದ 'ಕೋಲುಮಂಡೆ ಜಂಗಮ ದೇವ..' ಗೀತೆಯಿಂದಲೇ ಇಂದಿಗೂ ಪ್ರಸಿದ್ಧಿ ಹೊಂದಿರುವ ಲ.ನಾ.ಶಾಸ್ತ್ರಿಗೆ ಆ ಗೀತೆಗಾಗಿ ರಾಜ್ಯ ಸರ್ಕಾರದಿಂದ ಶ್ರೇಷ್ಠ ಗಾಯಕ ಪ್ರಶಸ್ತಿಗೆ ಭಾಜನರಾದರು.
ನಾದಬ್ರಹ್ಮ ಹಂಸಲೇಖ ಹಾಗೂ ವಿ.ಮನೋಹರ್ ಅವರ ಬಳಿ ಶಿಷ್ಯ ವೃತ್ತಿಯನ್ನೂ ಮಾಡಿದ್ದ ಎಲ್.ಎನ್.ಶಾಸ್ತ್ರಿಯವರು 'ಕನಸಲ್ಲೂ ನೀನೇ ಮನಸಲ್ಲೂ ನೀನೇ' ಚಿತ್ರಕ್ಕೆ ಸಂಗೀತ ನೀಡುವ ಮೂಲಕ ಸ್ವಾತಂತ್ರ್ಯ ಸಂಗೀತ ನಿರ್ದೇಶಕರಾದರು.
'ರವಿಮಾಮ', 'ಆಂಟಿ ಪ್ರೀತ್ಸೆ', 'ಹಾಲು ಸಕ್ಕರೆ', 'ನಿನಗೋಸ್ಕರ', 'ಬಳ್ಳಾರಿ ನಾಗ', 'ಡೆಡ್ಲಿ -2', 'ಫ್ಲಾಪ್', 'ಮೆಲೋಡಿ' ಮುಂತಾದ ಗೀತೆಗಳಿಗೆ ಸಂಗೀತವನ್ನು ನೀಡಿದ್ದಾರೆ. ಎಲ್.ಎನ್.ಶಾಸ್ತ್ರಿಯವರ ನಿಧನಕ್ಕೆ ನಾದ ಬ್ರಹ್ಮ ಹಂಸಲೇಖ, ವಿ.ಮನೋಹರ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವರು ಸಂತಾಪವನ್ನು ಸೂಚಿಸಿದ್ದಾರೆ.