Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಣ್ಣೇ ಅದಿರಿಂದಿ' ಮೂಲಕ ಕನ್ನಡಿಗರ ಮನಗೆದ್ದ ಮಂಗ್ಲಿ ಈಗ ಚುನಾವಣೆ ಪ್ರಚಾರಕ್ಕೆ ಎಂಟ್ರಿ
'ರಾಬರ್ಟ್' ಚಿತ್ರದ 'ಕಣ್ಣೇ ಅದಿರಿಂದಿ' ಹಾಡಿನ ಮೂಲಕ ಕನ್ನಡಿಗರ ಮನಗೆದ್ದ ತೆಲುಗು ಗಾಯಕಿ ಮಂಗ್ಲಿ ಈಗ ಕರ್ನಾಟಕ ಉಪ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚೊಚ್ಚಲ ಹಾಡಿನೊಂದಿಗೆ ಕರ್ನಾಟಕದಲ್ಲಿ ಹೆಚ್ಚು ಅಭಿಮಾನಿಗಳನ್ನು ಗಳಿಸಿಕೊಂಡ ಗಾಯಕಿ ಈಗ ಮಸ್ಕಿ ಉಪಚುನಾವಣೆಯಲ್ಲಿ ಮತಯಾಚನೆ ಮಾಡಲಿದ್ದಾರೆ.
Recommended Video
ಏಪ್ರಿಲ್ 17 ರಂದು ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಸ್ಟಾರ್ ಸಿಂಗರ್ ಮಂಗ್ಲಿ ಮತಯಾಚಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರ ಪರವಾಗಿ ಮಂಗ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಮುಂದೆ ಓದಿ...
ತಾಂಡಾದಲ್ಲಿ ಹುಟ್ಟಿದ ಸತ್ಯವತಿ, ಮಂಗ್ಲಿ ಆದ ಮುಳ್ಳಿನ ಹಾದಿಯ ಪಯಣ
ಏಪ್ರಿಲ್ 13ಕ್ಕೆ ಮಂಗ್ಲಿ ಪ್ರಚಾರ
ಏಪ್ರಿಲ್ 13 ರಂದು ಮಂಗಳವಾರ ತೆಲುಗು ಗಾಯಕಿ ಮಂಗ್ಲಿ ಮಸ್ಕಿ ವಿಧಾನಸಭೆ ಕ್ಷೇತ್ರ ಹಲವು ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ತೆಲುಗು ಮಾತನಾಡುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ, ತೆಲುಗು ಜನರನ್ನು ಬಿಜೆಪಿ ಪರ ಸೆಳೆಯಲು ಮಂಗ್ಲಿ ಅವರನ್ನು ಕರೆತರುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
'ಕಣ್ಣೇ ಅದಿರಿಂದಿ' ಮೂಲಕ ಸಂಚಲನ
ಗಾಯಕಿ ಮಂಗ್ಲಿ ಹಲವು ವರ್ಷಗಳಿಂದ ಟಾಲಿವುಡ್ನಲ್ಲಿ ಸಕ್ರಿಯರಾಗಿದ್ದಾರೆ. ಆದರೆ, 'ಕಣ್ಣೇ ಅದಿರಿಂದಿ' ಹಾಡಿನ ಮೂಲಕ ಕರ್ನಾಟಕದ ಪಾಲಿಗೆ ಹತ್ತಿರವಾದರು. ದರ್ಶನ್ ನಟನೆಯ ರಾಬರ್ಟ್ ಚಿತ್ರದ 'ಕಣ್ಣೇ ಅದಿರಿಂದಿ' (ತೆಲುಗು ಹಾಡು) ಮಂಗ್ಲಿಗೆ ಬಹಳ ದೊಡ್ಡ ಖ್ಯಾತಿ ತಂದುಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ 'ಕಣ್ಣೇ ಅದಿರಿಂದಿ' ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿತ್ತು. ಹೀಗಾಗಿ, ಕರ್ನಾಟಕದಲ್ಲಿ ಮಂಗ್ಲಿ ಹೆಚ್ಚು ಫಾಲೋವರ್ಸ್ ಹೊಂದಿದರು.
ಮೊದಲ ಕನ್ನಡ ಹಾಡು ಹಾಡಿದ ಮಂಗ್ಲಿ: ಯಾವ ಸಿನಿಮಾ, ಹಾಡು ಯಾವುದು?
ಮೊದಲ ಹಾಡು ಹಾಡಿದ ಮಂಗ್ಲಿ
'ಕಣ್ಣೇ ಅದಿರಿಂದಿ' ಮೂಲಕ ಸ್ಯಾಂಡಲ್ವುಡ್ ಗಮನ ಸೆಳೆದ ಮಂಗ್ಲಿ ಇತ್ತೀಚಿಗಷ್ಟೆ ಕನ್ನಡದಲ್ಲಿ ಮೊದಲ ಹಾಡು ಹಾಡಿದ್ದಾರೆ. ಕನ್ನಡದ 'ಕರಿಯಾ ಐ ಲವ್ ಯೂ' ಸಿನಿಮಾದಲ್ಲಿ ಮೊದಲ ಬಾರಿಗೆ ಮಂಗ್ಲಿ ಕನ್ನಡದ ಹಾಡಿಗೆ ದನಿ ಆಗಿದ್ದಾರೆ. ಇದೊಂದು ಯುಗಳ ಗೀತೆ ಆಗಿದ್ದು, ಮಂಗ್ಲಿ ಜೊತೆಗೆ ನವೀನ್ ಸಜ್ಜು ಸಹ ಹಾಡಿಗೆ ದನಿಗೂಡಿಸಿದ್ದಾರೆ.
ಪ್ರತಾಪ್ ಗೌಡ ಪಾಟೀಲ್ಗೆ ಕೊರೊನಾ
ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಕ್ವಾರಂಟೈನ್ ಆಗಿದ್ದಾರೆ ಎಂಬ ಮಾಹಿತಿ ಇದೆ. ಹಾಗಿದ್ದರೂ, ಮಂಗ್ಲಿ ಅವರು ಮಂಗಳವಾರ ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಕಮಲದ ಪರ ಪ್ರಚಾರ ನಡೆಸಲಿದ್ದಾರೆ.