Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಗಾಯಕಿ ಎಂ ಡಿ ಪಲ್ಲವಿ
ಎಂ ಡಿ ಪಲ್ಲವಿ ಕನ್ನಡದ ಅದ್ಭುತ ಗಾಯಕಿ. ಎಷ್ಟೋ ಭಾವ ಗೀತೆಗೆ ಭಾವ ತುಂಬಿರುವ ಇವರು ಅದೆಷ್ಟೋ ಪ್ರಶಸ್ತಿ ಪುರಸ್ಕಾರ ಪಡೆದಿದ್ದಾರೆ. ಅದರೊಂದಿಗೆ ಇದೀಗ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಕೂಡ ಅವರ ಕೈ ಸೇರಿದೆ.
ಉಸ್ತದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ 2018 ಪ್ರಶಸ್ತಿ ಪಟ್ಟಿ ಘೋಷಣೆ ಆಗಿದೆ. ಈ ಬಾರಿ 32 ಯುವ ಪ್ರತಿಭೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಗಾಯಕಿ ಎಂ ಡಿ ಪಲ್ಲವಿ ಅವರ ಹೆಸರು ಸಹ ಇದೆ.
ಗಾಯಕಿ ಪಲ್ಲವಿ ಅವರ ವಿಶೇಷ 'ಸ್ವರ ಸ್ಮರಣೆ'
ಸಂಗೀತ ನಾಟಕ ಅಕಾಡಮಿ ಕಡೆಯಿಂದ ಈ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. 40 ವರ್ಷಕ್ಕಿಂತ ಕೆಳಗಿನ ಸಾಧಕರಿಗೆ ಪ್ರಶಸ್ತಿ ಕೊಡಲಾಗುತ್ತಿದೆ. ಈ ಮೂಲಕ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಹಾಯ ಮಾಡಲಾಗುತ್ತಿದೆ. ಪ್ರಶಸ್ತಿಯ ಜೊತೆಗೆ 25 ಸಾವಿರ ಪ್ರೋತ್ಸಾಹ ಧನ ಕೂಡ ಸಾಧಕರಿಗೆ ಸಿಗಲಿದೆ.
2006 ರಿಂದ ಸಂಗೀತ ನಾಟಕ ಅಕಾಡಮಿ ಸಂಸ್ಥೆ ಉಸ್ತದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪ್ರಶಸ್ತಿಯನ್ನು ನೀಡುತ್ತಿದೆ. ಸಂಗೀತ, ನೃತ್ಯ ಹಾಗೂ ನಾಟಕ ವಿಭಾಗದ ಸಾಧಕರನ್ನು ಇಲ್ಲಿ ಗುರುತಿಸಲಾಗುತ್ತಿದೆ.
ಅಂದಹಾಗೆ, ಎಂ ಡಿ ಪಲ್ಲವಿ ಸುಗಮ ಸಂಗೀತ ಗಾಯಕಿ ಆಗಿದ್ದಾರೆ. ಅದೆಷ್ಟೋ ಭಾವಗೀತೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. 15ಕ್ಕೂ ಹೆಚ್ಚು ಸಿನಿಮಾ ಹಾಡುಗಳಿಗೆ ಧ್ವನಿಯಾಗಿದ್ದಾರೆ. ದುನಿಯಾ ಸಿನಿಮಾ 'ನೋಡಯ್ಯ ಕ್ವಾಟೆ ಲಿಂಗವೇ..' ಹಾಡಿಗೆ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.