Don't Miss!
- Finance ಲಕ್ಷ ಲಕ್ಷ ಕೋಟಿ ಇದ್ದರೂ ಇದೊಂದು ಕೊರತೆ ಈ ಶ್ರೀಮಂತನಿಗೆ ಕಾಡಿತ್ತು!
- Automobiles 28 ಲಕ್ಷದ ಬೈಕನ್ನು ಲೀಲಾಜಾಲವಾಗಿ ಓಡಿಸಿದ ಲೇಡಿ ಸೂಪರ್ಸ್ಟಾರ್: ಇಂತಹ ಗರ್ಲ್ಫ್ರೆಂಡ್ ಬೇಕೆಂದ ನೆಟ್ಟಿಗರು!
- Technology Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- News ಹನುಮಾನ್ ಚಾಲೀಸಾ ಗಲಾಟೆ: ತೇಜಸ್ವಿ ಸೂರ್ಯನಿಂದ ದ್ವೇಷ ಹರಡುವ ಯತ್ನ- ದಿನೇಶ್ ಗುಂಡೂರಾವ್
- Sports BCCI Central Contract: ಶ್ರೇಯಸ್, ಇಶಾನ್ ಕಡೆಗಣನೆ: ಯುವ ಆಟಗಾರರಿಗೆ ಮಣೆ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Breaking: ಎಸ್ಪಿಬಿ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆ ಬಳಿ ಹೆಚ್ಚಿದ ಪೊಲೀಸ್ ಭದ್ರತೆ
ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಆತಂಕ ಹೆಚ್ಚಿಸಿದೆ. ಎಸ್ಪಿಬಿ ಆರೋಗ್ಯ ಕ್ಷೀಣಿಸಿದೆ ಎಂದು ವೈದ್ಯರು ಈಗಾಗಲೇ ಮಾಹಿತಿ ನೀಡಿದ್ದರು.
ಎಸ್ಬಿ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿಯುತ್ತಿದ್ದಂತೆ ಆಸ್ಪತ್ರೆ ಬಳಿ ನೂರಾರು ಅಭಿಮಾನಿಗಳು ದೌಡಾಯಿಸಿದ್ದು, ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇನ್ನು ಎಸ್ಪಿಬಿ ಕುಟುಂಬದವರು ಸಹ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪತ್ನಿ ಸಾವಿತ್ರಿ, ಸಹೋದರಿ ಶೈಲಜಾ, ಮಗ ಚರಣ್, ಪುತ್ರಿ ಪಲ್ಲವಿ ಆಗಮಿಸಿದ್ದಾರೆ. ನಿರ್ದೇಶಕ ಭಾರತಿರಾಜ್ ಸಹ ಭೇಟಿ ನೀಡಿದ್ದಾರೆ.
ನೀವು ನನಗಾಗಿ ಹಾಡಿದ ಪ್ರತಿಯೊಂದು ಹಾಡಿಗೂ ಧನ್ಯವಾದಗಳು: ಎಸ್ ಪಿ ಬಿ ಬಗ್ಗೆ ಸಲ್ಮಾನ್ ಖಾನ್ ಭಾವುಕ ಮಾತು
Recommended Video
ಆಸ್ಪತ್ರೆಯಿಂದ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿದ ನಿರ್ದೇಶಕ ಭಾರತಿರಾಜ ''ನನ್ನ ದುಃಖವನ್ನು ಹೇಗೆ ವ್ಯಕ್ತಪಡಿಸಲಿ ಅಂತ ಗೊತ್ತಾಗ್ತಿಲ್ಲ. ಈಗಲೂ ಎಸ್ಪಿಬಿ ಕುರಿತು ನನಗೆ ಸಣ್ಣ ನಂಬಿಕೆ ಇದೆ. 50 ವರ್ಷ ಹೋಗೋ-ಬಾರೋ ಎಂದು ಇದ್ದವರು ನಾವು. ಪ್ರಕೃತಿ ಮುಂದೆ ನಾವು ಏನು ಅಲ್ಲ, ಈಗ ಎಲ್ಲವೂ ಆ ದೇವರ ಕೈಯಲ್ಲಿದೆ'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.