Don't Miss!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ವಿವಾದ: ಇಂದ್ರಜಿತ್ ಲಂಕೇಶ್ ವಿರುದ್ಧ ಗೃಹ ಸಚಿವರಿಗೆ ದೂರು
ನಟ ದರ್ಶನ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ನಿರ್ದೇಶಕ-ಪತ್ರಕರ್ತ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ದೂರು ನೀಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಟಿ.ಜೆ ಅಬ್ರಹಾಂ, ಇಂದ್ರಜಿತ್ ಲಂಕೇಶ್ ದಲಿತ ಎನ್ನುವ ಪದವನ್ನ ಪದೇ ಪದೇ ಬಳಸಿದ್ದಾರೆ, ಸಮುದಾಯವನ್ನು ಎತ್ತು ಕಟ್ಟುವ ಪ್ರಯತ್ನ ಮಾಡಿದ್ದಾರೆ, ಸಮುದಾಯಕ್ಕೆ ಕೋಪ ಬರುವಂತೆ ಮಾಡಿದ್ದಾರೆ ಎಂದು ದೂರಿದ್ದಾರೆ.
ದರ್ಶನ್ ಹಿಂಬಾಲಕರು, ರೌಡಿಗಳಿಂದ ಕೊಲೆ ಬೆದರಿಕೆ: ಇಂದ್ರಜಿತ್ ದೂರು
ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ ಘಟನೆಯಲ್ಲಿ ಸಪ್ಲೈಯರ್ ದಲಿತ ಎಂದು ಪದೇ ಪದೇ ಒತ್ತಿ ಹೇಳಿದರು. ಈ ಕೇಸ್ನಲ್ಲಿ ದಲಿತರನ್ನು ಎತ್ತು ಕಟ್ಟುವ ಕೆಲಸ ಉದ್ದೇಶದಿಂದ ಹೀಗೆ ಹೇಳಿದರು. ಬೇರೆ ಸಮುದಾಯದವರ ಮೇಲೆ ದ್ವೇಷ ಹುಟ್ಟಿಸುವ ಹೇಳಿಕೆ ಕೊಟ್ಟಿದ್ದಾರೆ, ಅವರ ವಿರುದ್ಧ ಕ್ರಮ ಜರುಗಿಸಿ ಎಂದು ಒತ್ತಾಯಿಸಿದರು.
ಮೈಸೂರು ಪೋಲೀಸರು ಕಾಂಪ್ರುಮೈಜ್ ಆಗಿದ್ದಾರೆ. ಮೈಸೂರಿನ ಎಲ್ಲಾ ಪೋಲೀಸ್ ಸ್ಟೇಷನ್ ಗಳು ಸೆಟಲ್ ಮೆಂಟ್ ಸ್ಟೇಷನ್ ಆಗಿದೆ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಮೈಸೂರು ಪೋಲಿಸರ ಮಾನ ಮರ್ಯಾದೆ ಹೋಗಿದೆ. ಇಂದ್ರಜಿತ್ ವಿರುದ್ದ ಮೈಸೂರು ಪೋಲೀಸರು ಮಾನ ನಷ್ಟ ಮೊಕೊದ್ದಮೆ ಹಾಕಿ ಎಂದು ಆಗ್ರಹಿಸಿದ್ದಾರೆ.
ದರ್ಶನ್ ವಿವಾದ: ಇಂದ್ರಜಿತ್ ನಂತರ ಜೆಡಿಎಸ್ನಿಂದಲೂ ದೂರು ದಾಖಲು
ಇಂದ್ರಜಿತ್ಗೆ ಬೆದರಿಕೆ
ದರ್ಶನ್ ವಿರುದ್ಧ ಆರೋಪಗಳನ್ನು ಮಾಡಿರುವ ಹಿನ್ನೆಲೆ ಅವರ ಹಿಂಬಾಲಕರು, ರೌಡಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಜೆಡಿಎಸ್ನಿಂದಲೂ ದೂರು
Recommended Video
ಇಂದ್ರಜಿತ್ ಲಂಕೇಶ್ ಮತ್ತು ಎಚ್ಡಿ ಕುಮಾರಸ್ವಾಮಿ ಫೋಟೋ ದುರ್ಬಳಕೆ ಮಾಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಜೆಡಿಎಸ್ ಕಾನೂನು ಘಟಕದ ಪ್ರದೀಪ್ ಕುಮಾರ್ ದೂರು ನೀಡಿದ್ದಾರೆ.