Don't Miss!
- News
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದ ಸಿದ್ದರಾಮಯ್ಯ.! ಆ ಪತ್ರದಲ್ಲಿ ಏನಿದೆ.?
- Sports
IND-W vs SA-W T20 Tri-series Final: ಭಾರತ ವನಿತೆಯರ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ
- Lifestyle
ಮಗುವಿಗೆ ತುಂಬಾ ಜ್ವರ ಇದ್ದಾಗ ಏನು ಮಾಡಬೇಕು?
- Finance
6 ತಿಂಗಳಲ್ಲಿ 2ನೇ ಬಾರಿಗೆ ಉದ್ಯೋಗಿಗಳನ್ನು ವಜಾಗೊಳಿಸಿದ Byju's: ಈ ಬಾರಿ ಎಷ್ಟು ನೌಕರರು?
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Technology
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಸಾವಿರುಪಾಯಿಗೆ ಸ್ವರ್ಗ' ಈ ಕಿರುಚಿತ್ರಕ್ಕೆ ಕಾಶಿನಾಥ್, ಉಪ್ಪಿನೇ ಸ್ಪೂರ್ತಿ!
ಸಿನಿಪ್ರಿಯರಿಗೆ ಜೀವನದಲ್ಲೊಂದು ಸಿನಿಮಾವನ್ನಾದರೂ ನಿರ್ದೇಶನ ಮಾಡಬೇಕು ಅನ್ನೋ ಆಸೆ ಇರುತ್ತೆ. ಟಿಕ್ ಟಾಕ್ ಸ್ಟಾರ್ ಅಲ್ಲು ರಘುಗೆ ಕೂಡ ಇಂತಹ ಆಸೆ ಇದ್ದೇ ಇತ್ತು. ಅದಕ್ಕೆ ತಮ್ಮ ಜೀವನದಲ್ಲಿ ಹೊಸದೊಂದು ಹೆಜ್ಜೆಯನ್ನು ಇಟ್ಟಿದ್ದಾರೆ. ಅದುವೇ ಸಿನಿಮಾ ನಿರ್ದೇಶನ.
ಟಿಕ್ ಟಾಕ್ ರೀಲ್ಸ್ ಮೂಲಕ ಸೋಶಿಯಲ್ ಮೀಡಿಯಾ ಮಿಂಚಿದ್ದ ಅಲ್ಲು ರಘು ಇದೇ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಕಿರುಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಸದ್ಯ 'ಸಾವಿರುಪಾಯಿಗೆ ಸ್ವರ್ಗ' ಅನ್ನೋ ಟೈಟಲ್ ಇಟ್ಟು ಶಾರ್ಟ್ ಫಿಲ್ಮ್ ಮಾಡಿದ್ದಾರೆ. ಈ ಕಿರುಚಿತ್ರ ಈಗಾಗಲೇ ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ.
'ಸಾವಿರುಪಾಯಿಗೆ ಸ್ವರ್ಗ' ಕಿರುಚಿತ್ರಕ್ಕೆ ಅಲ್ಲು ರಘು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಾಗೇ ಈ ಕಿರುಚಿತ್ರದಲ್ಲಿ ಶಿವಪುತ್ರ ಯಶಾರಾದ, ವರುಣ್ ಆರಾಧ್ಯಾ, ರಶ್ಮಿತಾ ಗೌಡ ಕೂಡ ನಟಿಸಿದ್ದಾರೆ. ಡಿಂಡಿಮ ಸಂಭಾಷಣೆ, ರಾಘವ್ ಹಾಗೂ ಅಭಿನಂದನ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಚಲ್ಲ ಛಾಯಾಗ್ರಾಹಣ, ಕೃಷ್ಣ ಸುಜನ್ ಸಂಕಲನವಿದೆ.
ಮೊದಲ ಕಿರು ಚಿತ್ರ ನಿರ್ದೇಶನದ ಖುಷಿಯಲ್ಲಿರೋ ಅಲ್ಲು ರಘು "ಇದು ನನ್ನ ನಿರ್ದೇಶನದ ಮೊದಲ ಕಿರುಚಿತ್ರ. ಈ ಚಿತ್ರಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವಾರು ಜನ ಸಹಾಯ ಮಾಡಿದ್ದಾರೆ. ಅವರೆಲ್ಲರ ಪ್ರೋತ್ಸಾಹದಿಂದಲೇ ಈ ಕಿರುಚಿತ್ರ ಮಾಡಲು ಸಾಧ್ಯವಾಯ್ತು ಎಲ್ಲರಿಗೂ ನನ್ನ ಧನ್ಯವಾದಗಳು. ನನಗೆ ಚಿಕ್ಕ ವಯಸ್ಸಿನಿಂದಲೂ ಸಿನಿಮಾಗಳು ತುಂಬಾ ಇಷ್ಟ. ಉಪೇಂದ್ರ, ಕಾಶಿನಾಥ್ ನನಗೆ ಸ್ಪೂರ್ತಿ. " ಎಂದು ಹೇಳಿದ್ದಾರೆ.

ಹಾಗೇ ನಟಿ ರಶ್ಮಿತ ಗೌಡಗೂ ಇದು ಮೊದಲ ಕಿರುಚಿತ್ರ. ಅಲ್ಲದೆ ಭರತನಾಟ್ಯಂ ಡಾನ್ಸರ್ ಆಗಿದ್ದರೂ, ಮಾಡೆಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ನಟನೆ ಇಷ್ಟವಿದ್ದಿದ್ದರಿಂದ ಈ ಚಿತ್ರದಲ್ಲಿ ನಟಿಸಿದ್ದಾರೆ. " ಈ ಸಿನಿಮಾದಲ್ಲಿ ನಟಿಸಿದ್ದು ತುಂಬಾ ಖುಷಿ ಇದೆ. ಅವಕಾಶ ನೀಡಿದ್ದಕ್ಕೆ ನಿರ್ದೇಶಕರಿಗೆ ತುಂಬಾ ಧನ್ಯವಾದಗಳು." ಎಂದು ಖುಷಿ ವ್ಯಕ್ತಪಡಿಸಿದ್ದಾರೆ.