Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ಯಾನ್ ಇಂಡಿಯಾ ವಿರೋಧಿಸಿದ್ದಕ್ಕೆ ನಟ ಜಗ್ಗೇಶ್ ವಿರುದ್ಧ ಟೀಕೆ
ಕನ್ನಡ ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆ ಹಿರಿಯ ನಟ ಜಗ್ಗೇಶ್ ಪ್ರೆಸ್ ಮೀಟ್ ಮಾಡಿದ್ದರು. ಈ ಸುದ್ದಿಗೋಷ್ಠಿಯಲ್ಲಿ ತಮ್ಮ ನಾಲ್ಕು ದಶಕಗಳ ಅನುಭವದ ಬಗ್ಗೆ ಮುಕ್ತವಾಗಿ ಮಾತನಾಡಿದ ಜಗ್ಗೇಶ್ ಹಲವಾರು ವಿಚಾರಗಳನ್ನು ಚರ್ಚಿಸಿದರು.
Recommended Video
ಈ ವೇಳೆ ಕನ್ನಡ ಚಿತ್ರರಂಗವನ್ನು ಹಾಗೂ ಕನ್ನಡತನವನ್ನು ಉಳಿಸೋದು ಮುಖ್ಯ. ಯಾವುದೋ ಅದು ಪ್ಯಾನ್ ಇಂಡಿಯಾ...? ಪ್ಯಾನ್ ಇಂಡಿಯಾ ಸಿನಿಮಾ ಬಂದು ನಮ್ಮನ್ನ ಉದ್ದಾರ ಮಾಡೋಲ್ಲಾ. ಪ್ಯಾನ್ ಇಂಡಿಯಾದಿಂದ ನಮ್ಮ ಕನ್ನಡಿರಿಗೆ ಕೆಲಸ ಇಲ್ಲ. ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಹಾಗಿದೆ. ಇದರಿಂದ ನಮ್ಮ ನೆಲದ ಜನರಿಗೆ ಕೆಲಸ ಇಲ್ಲದಂತಾಗಿದೆ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ನನ್ನ ಬಳಿ 2 ಕನಸನ್ನ ಹೇಳಿಕೊಂಡಿದ್ದರು, ಅದನ್ನ ನಿಜ ಮಾಡಿದ್ದಾರೆ; ಪತಿಯ ಬಗ್ಗೆ ಪರಿಮಳ ಜಗ್ಗೇಶ್ ಮಾತು
ಜಗ್ಗೇಶ್ ಅವರ ಈ ಹೇಳಿಕೆ ಕೆಲವರಿಗೆ ಬೇಸರ ತರಿಸಿದೆ. ಪ್ಯಾನ್ ಇಂಡಿಯಾ ಚಿತ್ರ ಬಂದ ಬಳಿಕವೇ ಕನ್ನಡ ಚಿತ್ರರಂಗ ಇನ್ನೊಂದು ಹಂತಕ್ಕೆ ಹೋಗುತ್ತಿದೆ, ಅದು ಗೊತ್ತಿಲ್ಲದೇ ಮಾತನಾಡಬೇಡಿ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗ್ಗೇಶ್ ಅವರ ಹೇಳಿಕೆ ಹಿನ್ನೆಲೆ ಇದು ಕನ್ನಡ ಚಿತ್ರರಂಗದಲ್ಲಿ ಸ್ಟಾರ್ವಾರ್ ಶುರು ಮಾಡುವ ಸೂಚನೆ ನೀಡಿದೆ. ಜಗ್ಗೇಶ್ ಹೇಳಿಕೆ ಪರ ಕೆಲವು ಸ್ಟಾರ್ ನಟರ ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ಮತ್ತೊಂದೆಡೆ ಮತ್ತೆ ಕೆಲವು ನಟರ ಅಭಿಮಾನಿಗಳು ಜಗ್ಗೇಶ್ ಹೇಳಿಕೆ ಖಂಡಿಸಿದ್ದಾರೆ.
'ಪ್ಯಾನ್ ಇಂಡಿಯಾ ನಮ್ಮನ್ನ ಉದ್ದಾರ ಮಾಡಲ್ಲ': ನಟ ಜಗ್ಗೇಶ್ ಅಸಮಾಧಾನ
ಈ ಬೆಳವಣಿಗೆಯನ್ನು ಗಮನಿಸಿದ ನಟ ಜಗ್ಗೇಶ್ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ''ಕನ್ನಡ ಚಿತ್ರರಂಗ, ಬೆಳೆಯುವ ಯುವನಟ ನಟಿಗಾಗಿ ಆಡಿದ ಮಾತಿಗೆ ಹೀಗಾ? ಪರವಾಗಿಲ್ಲಾ ಮಕ್ಕಳು ಎಷ್ಟೆ ಬೆಳೆದರು ತಂದೆಯ ಮುಂದೆ ಮಕ್ಕಳೆ ವಿನಃ ತಂದೆಯಾಗಲ್ಲಾ. ಶಿವಣ್ಣ, ಪುನೀತ್, ದರ್ಶನ್, ಗಣೇಶ್, ವಿಜಿ ಪ್ಯಾನ್ ಇಂಡಿಯಾ ನಂಬದೆ ಕನ್ನಡ ಕನ್ನಡಿಗರ ಸೀಮೆಯಲ್ಲೆ ಕನ್ನಡದ ಕಲಾವಿದ ತಂತ್ರಜ್ಞರ ಬೆಳಸಿ ತಾವು ಇದ್ದಾರೆ. offcorce ನಾನು ಇರುವೆ. ನಮಗೆ 100% ಕನ್ನಡ ಜನ ಸಾಕು'' ಎಂದು ಹೇಳಿದ್ದಾರೆ.
ಅಂದ್ಹಾಗೆ, ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿದೆ. ಕನ್ನಡದಲ್ಲಿ ತಯಾರಾದರೂ ಅದನ್ನು ತೆಲುಗು, ತಮಿಳಿಗೆ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಸ್ಟಾರ್ ನಟರ ಚಿತ್ರಗಳು ಮಾತ್ರವಲ್ಲ ಹೊಸ ಸಿನಿಮಾಗಳು ಸಹ ಪ್ಯಾನ್ ಇಂಡಿಯಾ ಎಂದು ಪ್ರಚಾರ ಮಾಡುತ್ತಿರುವ ಉದಾಹರಣೆಯೂ ಇದೆ.