Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ಟರ ಅಡ್ಡಕ್ಕೆ ಬಂದ ಅಭಿಸಾರಿಕೆ ಈಕೆ
ಮುಗುಳುನಗೆ ಸಿನಿಮಾದ ನಂತರ ಯೋಗರಾಜ್ ಭಟ್ಟರು ಹೊಸ ತಂಡದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಿದ್ದರಾಗಿದ್ದಾರೆ. ಕಾಲ್ ಕೆ ಜಿ ಪ್ರೀತಿ ಸಿನಿಮಾ ಹೀರೋ ವಿಹಾನ್ ಗೌಡ ಅವರನ್ನ ಚಿತ್ರಕ್ಕೆ ನಾಯಕನಾಗಿ ಸೆಲೆಕ್ಟ್ ಮಾಡಿಕೊಂಡು. ಒಂದ್ ಒಳ್ಳೆ ಕಥೆಯನ್ನ ಆಯ್ಕೆ ಮಾಡಿ ಸಿನಿಮಾ ಮಾಡಲು ಸಿದ್ದರಾಗಿದ್ದಾರೆ ಯೋಗರಾಜ್ ಭಟ್ಟರು.
ತಮ್ಮ ಹೊಸ ಸಿನಿಮಾದ ಪಾತ್ರವೊಂದಕ್ಕೆ ಅಕ್ಷರ ಗೌಡರನ್ನ ಕರೆತಂದಿದ್ದ ಭಟ್ಟರು ಈಗ ಚಿತ್ರಕ್ಕೆ ಪ್ರಮುಖ ನಾಯಕಿಯನ್ನ ಆಯ್ಕೆ ಮಾಡಿದ್ದಾರೆ. 'ಅಭಿಸಾರಿಕೆ' ಹಾಗೂ 'ಎಂ ಎಲ್ ಎ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ನಟಿ ಸೋನಾಲ್ ಮಾಂಟರಿಯೋ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿಗಳು ಕೇಳಿ ಬರುತ್ತಿದೆ.
ಸದ್ಯ ಬಾಲಿವುಡ್ ಚಿತ್ರದಲ್ಲಿ ಬ್ಯುಸಿ ಆಗಿರುವ ಸೋನಾಲ್, ವಿಹಾನ್ ಜೊತೆಯಲ್ಲಿ ಜೋಡಿಯಾಗಿ ಅಭಿನಯಿಸುವುದು ಬಹುತೇಕ ಕನ್ಫರ್ಮ್ ಆಗಿದೆ. ಮಂಗಳೂರಿನ ಮೂಲದ ಸೋನಾಲ್ ಸಿನಿಮಾ ಜರ್ನಿಯ ಪ್ರಾರಂಭದಲ್ಲೇ ಒಳ್ಳೆ ನಿರ್ದೇಶಕರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ.
ಯೋಗರಾಜ್ ಭಟ್ಟರ ಹೊಸ ಚಿತ್ರಕ್ಕೆ ಸಿಕ್ಕ ನಾಯಕಿ ಇವರೇ
ಕಾಂತ್ ರಾಜ್ ಅವರ ಕಥೆಗೆ ಕಡ್ಡಿಪುಡಿ ಸಿನಿಮಾ ಖ್ಯಾತಿಯ ಮಾಸ್ತಿ ಚಿತ್ರಕತೆ ಬರೆಯುತ್ತಿದ್ದಾರೆ. ಸದ್ಯ ಸ್ಟಾರ್ ಕಾಸ್ಟ್ ಫೈನಲ್ ಮಾಡುತ್ತಿರುವ ಭಟ್ಟರು ತಿಂಗಳ ಅಂತ್ಯಕ್ಕೆ ಚಿತ್ರೀಕರಣ ಶುರು ಮಾಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.