twitter
    For Quick Alerts
    ALLOW NOTIFICATIONS  
    For Daily Alerts

    ತೂಕ ಇಳಿಸಿಕೊಂಡಿದ್ದೇ ಎಸ್ ಪಿ ಬಿ ಆರೋಗ್ಯಕ್ಕೆ ಮುಳುವಾಯ್ತಾ?

    |

    ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಹ್ಮಣ್ಯಂ ಅವರು ಇನ್ನು ನೆನಪು ಮಾತ್ರ. ಶುಕ್ರವಾರ ಮಧ್ಯಾಹ್ನ 1.04ರ ಸುಮಾರಿಗೆ ಎಸ್ ಪಿ ಬಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಸ್ ಪಿ ಬಿ ಇನ್ನಿಲ್ಲ ಎನ್ನುವ ಮಾತನ್ನು ಅವರ ಅಭಿಮಾನಿಗಳು, ಸ್ನೇಹಿತರು ಹೆಚ್ಚಾಗಿ ಅವರ ಅಪಾರ ಶಿಷ್ಯ ವೃಂದಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

    ಕಳೆದ ಒಂದು ತಿಂಗಳಿಂದ ಎಸ್ ಪಿ ಬಿ ತೀವ್ರ ನಿಗಾ ಘಟಕದಲ್ಲಿ, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಕೊರೊನಾ ನೆಗೆಟಿವ್ ಬಂದರೂ ಎಸ್ ಪಿ ಬಿ ಆರೋಗ್ಯ ಸುಧಾರಿಸಿರಲಿಲ್ಲ. ಆದರೂ ಬೇಗ ಗುಣಮುಖರಾಗಿ ಮತ್ತೆ ಬರ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ. ಎಸ್ ಪಿ ಬಿ ಅವರಿಗೆ ಇಮ್ಯುನಿಟಿ ಶಕ್ತಿ ಕಡಿಮೆ ಆಗಲು ಕಾರಣ ತೂಕ ಇಳಿಸಿಕೊಂಡಿರುವುದು ಎಂದು ಹೇಳಲಾಗುತ್ತಿದೆ. ಮುಂದೆ ಓದಿ...

    135 ಕೆಜಿ ಯಿಂದ 96 ಕೆಜಿ ತೂಕ ಇಳಿಸಿಕೊಂಡಿದ್ದ ಎಸ್ ಪಿ ಬಿ

    135 ಕೆಜಿ ಯಿಂದ 96 ಕೆಜಿ ತೂಕ ಇಳಿಸಿಕೊಂಡಿದ್ದ ಎಸ್ ಪಿ ಬಿ

    2012ರಲ್ಲಿ ಎಸ್ ಪಿ ಬಿ ಬಾರಿಯಾಟ್ರಿಕ್ ಶಸ್ತ್ರ ಚಿಕಿತ್ಸೆ ಒಳಗಾಗಿದ್ದರು. ಈ ಚಿಕಿತ್ಸೆಯ ಬಳಿಕ ಎಸ್ ಪಿ ಬಿ ಇಮ್ಯೂನಿಟಿ ಶಕ್ತಿ ಕಡಿಮೆಯಾಗಿತ್ತು ಎಂದು ಹೇಳಲಾಗುತ್ತಿದೆ. ಸರ್ಜರಿ ಮಾಡಿಸಿಕೊಳ್ಳುವ ಮೊದಲು ಎಸ್ ಪಿ ಬಿ 135 ಕೆಜಿ ತೂಕ ಹೊಂದಿದ್ದರು. ಸರ್ಜರಿ ಬಳಿಕ 96 ಕೆಜೆ ತೂಕಕ್ಕೆ ಇಳಿಸಿಕೊಂಡಿದ್ದರು.

    ಫಲಿಸಲಿಲ್ಲ ಪ್ರಾರ್ಥನೆ, ದಿಗ್ಗಜ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನಫಲಿಸಲಿಲ್ಲ ಪ್ರಾರ್ಥನೆ, ದಿಗ್ಗಜ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನ

    ತೂಕ ಇಳಿಸಿಕೊಂಡ ಬಗ್ಗೆ ಎಸ್ ಪಿ ಬಿ ಹೇಳಿದ್ದೇನು?

    ತೂಕ ಇಳಿಸಿಕೊಂಡ ಬಗ್ಗೆ ಎಸ್ ಪಿ ಬಿ ಹೇಳಿದ್ದೇನು?

    ಈ ಬಗ್ಗೆ ಮಾತನಾಡಿದ್ದ ಎಸ್ ಪಿ ಬಿ "ತೂಕ ಇಳಿಸಿಕೊಳ್ಳುವ ಚಿಕಿತ್ಸೆಗೆ ಒಳಗಾಗುವುದನ್ನು ಅನೇಕರು ಒಪ್ಪಿಕೊಳ್ಳುವುದಿಲ್ಲ. ಆದರೆ ನಾನು ಇದನ್ನ ಒಪ್ಪಲ್ಲ. ನಾನು 35ಕ್ಕು ಹೆಚ್ಚು ಕೆಜಿ ತೂಕ ಇಳಿಸಿಕೊಂಡಿದ್ದೇನೆ. ಶಸ್ತ್ರಚಿಕಿತ್ಸೆ ಮತ್ತು ಅದು ನನ್ನನ್ನು ಉತ್ತಮ ಗಾಯಕನನ್ನಾಗಿ ಮಾಡಿದೆ, ನನಗೆ ಉತ್ತಮ ಜೀವನ ಮಟ್ಟವನ್ನು ನೀಡಿದೆ" ಎಂದು ಹೇಳಿದ್ದರು.

    ಇಮ್ಯುನಿಟಿ ಶಕ್ತಿ ಕಡಿಮೆ ಆಗಿತ್ತು- ಅರ್ಚನಾ ಉಡುಪ

    ಇಮ್ಯುನಿಟಿ ಶಕ್ತಿ ಕಡಿಮೆ ಆಗಿತ್ತು- ಅರ್ಚನಾ ಉಡುಪ

    ತೂಕ ಇಳಿಸಿಕೊಂಡ ಬಳಿಕ ಎಸ್ ಪಿ ಬಿ ಆರೋಗ್ಯದಲ್ಲಿ ಏರುಪೇರು ಆಗುತ್ತಿತ್ತು, ಇಮ್ಯುನಿಟಿ ಶಕ್ತಿ ಕಡಿಮೆ ಆಗಿತ್ತು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಯಕಿ ಅರ್ಚನಾ ಉಡುಪ ಸಹ ಮಾತನಾಡಿದ್ದಾರೆ. ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ಅರ್ಚನಾ ಉಡುಪ, ಎಸ್ ಪಿ ಬಿ ಜೊತೆಗಿನ ನೆನಪನ್ನು ಹಂಚಿಕೊಂಡು ಕಣ್ಣೀರಾಕಿದರು. ಈ ಸಮಯದಲ್ಲಿ ತೂಕ ಇಳಿಸಿಕೊಂಡ ಬಳಿಕ ಇಮ್ಯುನಿಟಿ ಶಕ್ತಿ ಕಡಿಮೆ ಆಗಿತ್ತು ಎನ್ನುವ ಮಾತನ್ನು ಹೇಳಿದ್ದಾರೆ.

    ಸಂಗೀತ ಸರಸ್ವತಿಯ ಸ್ವಂತ ಪುತ್ರ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಬೆಳೆದು ಬಂದ ಹಾದಿಸಂಗೀತ ಸರಸ್ವತಿಯ ಸ್ವಂತ ಪುತ್ರ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಬೆಳೆದು ಬಂದ ಹಾದಿ

    Recommended Video

    ಕೊನೆಯ ಬಾರಿಗೆ ಫೇಸ್ಬುಕ್ ಲೈವ್ ಬಂದ SPB ಹೇಳಿದ್ದೇನು ಗೊತ್ತಾ..? | SPB Last Social media LIVE | Filmibeat
    ಗಣ್ಯರ ಸಂತಾಪ

    ಗಣ್ಯರ ಸಂತಾಪ

    ಎಸ್ ಪಿ ಬಿ ಇನ್ನಿಲ್ಲ ಎನ್ನುವ ಸುದ್ದಿ ಭಾರತೀಯ ಸಂಗೀತ ಲೋಕಕ್ಕೆ ಆಘಾತವುಂಟು ಮಾಡಿದೆ. ಚಿತ್ರರಂಗದ ಮತ್ತು ರಾಜಕೀಯ ಗಣ್ಯರು ಸೇರಿದಂತೆ ಎಲ್ಲರೂ ಎಸ್ ಪಿ ಬಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಅಪಾರ ಶಿಷ್ಯವೃಂದ ದುಃಖ ಸಾಗರದಲ್ಲಿ ಮುಳುಗಿದ್ದಾರೆ.

    English summary
    SP balasubrahmanyam undergoing weight loss surgery on 2012.
    Friday, September 25, 2020, 14:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X