Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರು ಹುಟ್ಟುಹಬ್ಬಕ್ಕೆ ಸರ್ಜಾ ಕುಟುಂಬ ಮಾಡಿರುವ ಈ ಕೆಲಸಕ್ಕೆ ಅಭಿಮಾನಿಗಳ ಪ್ರಶಂಸೆ
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬವನ್ನು ಇತ್ತೀಚೆಗೆ ಆಚರಣೆ ಮಾಡಲಾಗಿದೆ. ಚಿರು ಇಲ್ಲ ಎನ್ನುವ ನೋವಿನಲ್ಲೇ ಇಡೀ ಕುಟುಂಬ ಫೋಟೋ ಇಟ್ಟು ಪೂಜೆ ಮಾಡಿ ಜನ್ಮದಿನ ಆಚರಣೆ ಮಾಡಿದೆ. ಜನ್ಮ ದಿನದ ವಿಶೇಷವಾಗಿ ಚಿರು ಸರ್ಜಾ ಅಭಿನಯದ ಶಿವಾರ್ಜುನ ಸಿನಿಮಾವನ್ನು ರೀ ರಿಲೀಸ್ ಮಾಡಲಾಗಿದೆ, ಜೊತೆಗೆ ರಾಜಮಾರ್ತಾಂಡ ಸಿನಿಮಾದ ಇಂಟ್ರೋ ಸಾಂಗ್ ಸಹ ರಿಲೀಸ್ ಆಗಿದೆ.
ಈ ಎಲ್ಲಾ ವಿಚಾರಗಳು ಎಲ್ಲರಿಗೂ ಗೊತ್ತಿರುವುದೆ. ಆದರೆ ಅಣ್ಣನ ಹುಟ್ಟುಹಬ್ಬದ ದಿನ ತಮ್ಮ ಧ್ರುವ ಸರ್ಜಾ ಮಾಡಿರುವ ಕೆಲಸ ನಿಜಕ್ಕು ಅಚ್ಚರಿ ಮೂಡಿಸುತ್ತೆ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎನ್ನುವ ಹಾಗೆ ಸರ್ಜಾ ಕುಟುಂಬ ಮಾಡುವ ಸಾಮಾಜಿಕ ಕಾರ್ಯ ಸಹ ಯಾರಿಗೂ ಗೊತ್ತಾಗುವುದಿಲ್ಲ.
Exclusive: ಅಣ್ಣನ ಮಗುವಿಗೆ ಧ್ರುವ ಸರ್ಜಾ ಕಡೆಯಿಂದ 'ಬೆಳ್ಳಿ ತೊಟ್ಟಿಲು' ಉಡುಗೊರೆ
ಸಾಮಾನ್ಯವಾಗಿ ಹುಟ್ಟುಹಬ್ಬದ ದಿನ ಸಮೀಪವಿರುವ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ನೀಡಿ, ಅನಾಥ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಾರೆ. ಆದರೆ ಅಣ್ಣನ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ಕರ್ನಾಟಕದ ಅನೇಕ ಅನಾಥಾಶ್ರಮಗಳಿಗೆ ವಿಶೇಷವಾದ ಊಟದ ವ್ಯವಸ್ಥೆ ಮಾಡಿಸಿದ್ದಾರೆ.
ಸುಮಾರು 25 ರಿಂದ 30 ಸಾವಿರ ಜನರಿಗೆ ಅನ್ನದಾನ ಮಾಡಿದ್ದಾರೆ. ಧ್ರುವ ಸರ್ಜಾ ಈ ಕೆಲಸಕ್ಕೆ ಅನಾಥಾಶ್ರಮದ ಮಕ್ಕಳು, ವೃದ್ಧಾಶ್ರಮದಲ್ಲಿರುವವರು ಸಂತಸ ಪಟ್ಟಿದ್ದಾರೆ. ಜೊತೆಗೆ ಚಿರು ಸರ್ಜಾ ಹೆಸರಿನಲ್ಲಿ ಕೇಕ್ ಕತ್ತರಿಸಿ, ಚಿರುಗೆ ವಿಶ್ ಮಾಡಿದ್ದಾರೆ. ನಾವು ಅನಾಥರಲ್ಲ, ಸರ್ಜಾ ಕುಟುಂಬ ನಮಗೆ ಅನ್ನದಾನ ಮಾಡಿದ್ದಾರೆ ಎಂದು ಭಾವುಕರಾಗಿದ್ದಾರೆ.
Recommended Video
ನೋವಿನಲ್ಲೂ ಇನ್ನೊಬ್ಬರ ಹೊಟ್ಟೆ ತುಂಬಿಸೊ ಸರ್ಜಾ ಕುಟುಂಬದ ಈ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೆ ಹರಿದುಬರುತ್ತಿದೆ. ಸರ್ಜಾ ಕುಟುಂಬಕ್ಕೆ ದೇವರು ಇನ್ನೂ ಹೆಚ್ಚಿನ ಶಕ್ತಿ ಕೊಡಲಿ. ಎಂಥ ಒಳ್ಳೆಯ ಕಾರ್ಯಮಾಡಿದ್ದಾರೆ ಎಂದು ಹೊಗಳುತ್ತಿದ್ದಾರೆ. ಅನಾಥಾಶ್ರಮಕ್ಕೆ ವಿಶೇಷ ಊಟದ ವ್ಯವಸ್ಥೆ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.