Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಠ್ಯಕ್ಕೆ ಸಿಗುತ್ತಿರುವ ಆದ್ಯತೆ ಆಟಕ್ಕೇಕಿಲ್ಲ: ಕವಿರಾಜ್ ಪ್ರಶ್ನೆ
ಸಿನಿಮಾ ಸಾಹಿತಿ, ನಿರ್ದೇಶಕ ಕವಿರಾಜ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಸಮಾಜದ ಆಗು-ಹೋಗುಗಳಿಗೆ ಸ್ಪಂದಿಸುತ್ತಾ, ತಮ್ಮ ಅಭಿಪ್ರಾಯಗಳನ್ನು ಫೇಸ್ಬುಕ್ನಲ್ಲಿ ದಾಖಲಿಸುತ್ತಿರುತ್ತಾರೆ. ಒಲಂಪಿಕ್ಸ್ ನಡೆಯುತ್ತಿರುವ ಈ ಸಮಯದಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ಸಿಗದೇ ಇರುವ ಬಗ್ಗೆ ಕವಿರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
''ನಿನ್ನೆ ಕೇವಲ 60 ಸಾವಿರ ಜನಸಂಖ್ಯೆಯ ಬರ್ಮುಡಾ ದೇಶಕ್ಕೆ ಒಲಿಂಪಿಕ್ಸ್ ನಲ್ಲಿ ಟ್ರಯಾಥ್ಲಾನ್ ಸ್ಪರ್ಧೆಯಲ್ಲಿ ಫ್ಲೋರಾ ಡಫೀ ಎನ್ನುವ ಹೆಣ್ಣು ಮಗಳು ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾಳೆ. ನಮ್ಮ ದೇಶವು ಈ ತನಕ ಎಲ್ಲಾ ಒಲಿಂಪಿಕ್ಸ್ ಗಳನ್ನು ಸೇರಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಗಳಿಸಿರುವುದು 2008ರ ಬೀಜಿಂಗ್ ಒಲಿಂಪಿಕ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಅಭಿನವ್ ಬಿಂದ್ರಾ ಗೆದ್ದ ಒಂದೇ ಒಂದು ಚಿನ್ನದ ಪದಕ ಮಾತ್ರ. ಇದರ ಹೊರತಾಗಿ ನಾವು ಗೆದ್ದಿರುವ 8 ಚಿನ್ನದ ಪದಕಗಳು 40 ರಿಂದ 90 ವರ್ಷಗಳ ಹಿಂದೆ (1926 - 1980 ) ಅಂದರೆ ನಮ್ಮಲ್ಲಿ ಬಹುತೇಕರು ಜನಿಸುವ ಮೊದಲು ತಂಡವಾಗಿ ಹಾಕಿಯಲ್ಲಿ ಗೆದ್ದಿದ್ದು'' ಎಂದು ಹಳೆಯ ಮಾಹಿತಿ ಮುಂದಿಟ್ಟಿದ್ದಾರೆ ಕವಿರಾಜ್.
''ಪಠ್ಯಕ್ಕೆ ಕೊಟ್ಟಷ್ಟೇ ಪ್ರಾಮುಖ್ಯತೆಯನ್ನು ನಮ್ಮ ಸರ್ಕಾರ, ಶಾಲೆಗಳು, ಪೋಷಕರು ಕ್ರೀಡೆಗೂ ಕೊಡದೇ ಹೋದರೆ, ಪುಟ್ಟ ವಯಸ್ಸಿನಿಂದಲೇ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಪೋಷಿಸದೇ ಹೋದರೆ, ಅದೇ ವಾರಕ್ಕೊಂದು ಪಿಟಿ ಪಿರಿಯಡ್ ಮಾದರಿಯಲ್ಲೇ ಮುಂದುವರಿದರೆ ನಾವು ಕ್ರೀಡಾ ಜಗತ್ತಿನಲ್ಲಿ ಗುರುತರವಾದ ಸಾಧನೆ ಮಾಡುವುದು ಸಾಧ್ಯವೇ ಇಲ್ಲ. ಪ್ರತಿ ಒಲಿಂಪಿಕ್ ಮುಗಿದಾಗಲೂ ಈ ರೀತಿ ಪುಟ್ಟ ಪುಟ್ಟ ದೇಶಗಳು ಪದಕ ಗೆಲ್ಲುವುದನ್ನು ನೋಡಿ ಈ ಸಂಭ್ರಮದ ಭಾಗ್ಯ ನಮಗಿಲ್ಲವಲ್ಲ ಎಂದು ಕೊರಗುವುದಷ್ಟೇ ನಮ್ಮ ಪಾಲಿಗೆ ಉಳಿಯುವುದು'' ಎಂದಿದ್ದಾರೆ ಕವಿರಾಜ್.
''ಇದರಾಚೆ ಕ್ರೀಡೆಗೆ ಪ್ರೋತ್ಸಾಹ ಬೇಕಿರುವುದು ಕೇವಲ ಪದಕ ಗೆಲ್ಲಲು ಮಾತ್ರವಲ್ಲ. ಅದಕ್ಕಿಂತ ಮುಖ್ಯವಾಗಿ ಪಠ್ಯಪುಸ್ತಕಗಳಿಗಿಂತ ಹೆಚ್ಚಿನ ನೈಜ ಜೀವನ ಪಾಠ ಕ್ರೀಡೆಗಳಲ್ಲಿದೆ.ಸವಾಲನ್ನು ಎದುರಿಸುವ, ಸೋಲನ್ನು ಸ್ವೀಕರಿಸುವ, ಸೋತರು ಎದೆಗುಂದದೆ ಆ ಅನುಭವವನ್ನೇ ಗೆಲುವಿನ ಮೆಟ್ಟಿಲಾಗಿಸುವ, ಹೋರಾಟದ ಛಲ ಕಲಿಸುವ , ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವ, ಶಿಸ್ತು ಮತ್ತು ಸಂಯಮ ಕಲಿಸುವ ಮಹಾನ್ ಕಲೆಯೇ ಕ್ರೀಡೆ. ಹೆಚ್ಚು ಕ್ರೀಡಾ ಮನೋಭಾವ ಉಳ್ಳ ಯುವ ಸಮಾಜ ನಿರ್ಮಾಣವಾದರೆ ಅದು ಖಂಡಿತವಾಗಿಯು ದೇಶವನ್ನು ಎಲ್ಲಾ ರಂಗಗಳಲ್ಲೂ ಉತ್ತಮವಾಗಿ ಮುನ್ನಡೆಸುವುದು'' ಎಂದಿದ್ದಾರೆ ಕವಿರಾಜ್.