Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಇರುವುದೆಲ್ಲವ ಬಿಟ್ಟು' ತಂಡಕ್ಕೆ ಸಾಥ್ ನೀಡಿದ ಶ್ರೀ ಮುರಳಿ
'ಭರಾಟೆ' ಸಿನಿಮಾದಲ್ಲಿ ಬ್ಸುಸಿ ಇರುವ ನಟ ಶ್ರೀಮುರಳಿ ಇದೀಗ ಇನ್ನೊಂದು ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಚಿತ್ರದಲ್ಲಿ ಶ್ರೀಮುರಳಿ ಅವರ ಖಡಕ್ ಧ್ವನಿ ಇರಲಿದೆ.
ಅಂದಹಾಗೆ, ಈ ಸಿನಿಮಾದ ಕಥೆಯ ಪ್ರಮುಖ ಅಂಶವನ್ನು ಶ್ರೀಮುರಳಿ ನಿರೂಪಣೆ ನೀಡಲಿದ್ದಾರೆ. ಚಿತ್ರದ ಪ್ರಾರಂಭ ಮತ್ತು ಅಂತ್ಯದಲ್ಲಿ ಶ್ರೀಮುರಳಿ ಕಥೆಯನ್ನು ವಿವರಿಸಲಿದ್ದಾರೆ.
ಸುಂದರ ಸಾಹಿತ್ಯಕ್ಕೆ ಸೊಗಸಾದ ಸಂಗೀತ ಸೇರಿ ಮುದ್ದಾಗಿದೆ ಮೇಘನಾ ಹಾಡು
ಈ ಹಿಂದೆ ತಮಿಳು ನಟ ಸಿಂಬು ಈ ಚಿತ್ರದ ಒಂದು ಹಾಡನ್ನು ಹಾಡಿದ್ದರು. ಅದರ ಬಳಿಕ ಶ್ರೀಮುರಳಿ ಕೂಡ ಒಂದು ಒಳ್ಳೆಯ ಪ್ರಯತ್ನಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಇನ್ನು 'ಇರುವುದೆಲ್ಲವ ಬಿಟ್ಟು ಇರುವೆಬಿಟ್ಟುಕೊಳ್ಳುವುದೇ ಜೀವನ' ಸಿನಿಮಾವನ್ನು ಕಾಂತ ಕನ್ನಲಿ ನಿರ್ದೇಶನ ಮಾಡಿದ್ದಾರೆ. ಇದು ಅವರ ಎರಡನೇ ಸಿನಿಮಾವಾಗಿದ್ದು, ಈ ಬಾರಿ ವಿಭಿನ್ನ ಶೈಲಿಯ ಕಥೆ ಹೇಳುತ್ತಿದ್ದಾರೆ. ನಟಿ ಮೇಘನಾ ರಾಜ್ ತಮ್ಮ ಕೆರಿಯರ್ ನಲ್ಲಿಯೇ ಈ ರೀತಿಯ ಪಾತ್ರವನ್ನು ಮಾಡಿಲ್ಲವಂತೆ. ಮೇಘನಾ ಇಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ತಿಲಕ್ ಹಾಗೂ ಶ್ರೀ ಮಹದೇವ್ ನಾಯಕರಾಗಿದ್ದಾರೆ.
ದೇವರಾಜ್ ದಾವಣಗೆರೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ವಿ ಶ್ರೀಧರ್ ಸಂಭ್ರಮ್ ಸಂಗೀತ ನೀಡಿದ್ದಾರೆ. ಈಗಾಗಲೇ ಸಿನಿಮಾದ ಎಲ್ಲ ಹಾಡುಗಳು ಹಿಟ್ ಆಗಿವೆ.