Don't Miss!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ನಂತರ 'ತಲಾ' ಅಜಿತ್ ಭೇಟಿ ಮಾಡಿದ ಶ್ರೀಮುರಳಿ
Recommended Video
ರೋರಿಂಗ್ ಸ್ಟಾರ್ ಶ್ರೀಮುರಳಿ ಸದ್ಯ ಭರಾಟೆ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ರಾಜಸ್ತಾನ ಭಾಗದ ಶೂಟಿಂಗ್ ಮುಗಿಸಿ ಬಂದಿದ್ದ ಶ್ರೀಮುರಳಿ ಈಗ ಹೈದ್ರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಬ್ಯುಸಿಯಾಗಿದ್ದಾರೆ.
ಇತ್ತೀಚಿಗಷ್ಟೆ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರನ್ನ ಭೇಟಿ ಮಾಡಿದ್ದ ಶ್ರೀಮುರಳಿ, ಈಗ ತಮಿಳು ಸೂಪರ್ ಸ್ಟಾರ್ ಅಜಿತ್ ಕುಮಾರ್ ಅವರನ್ನ ಮೀಟ್ ಮಾಡಿದ್ದಾರೆ.
ಶ್ರೀಮುರಳಿ ಜೊತೆ ಮಹೇಶ್ ಬಾಬು : ಯಾವ್ ಸಿನಿಮಾ, ಏನ್ ವಿಶೇಷ?
ಅಜಿತ್ ಅವರನ್ನ ಭೇಟಿ ಮಾಡಿ ಕೆಲ ಸಮಯ ಇಂಡಸ್ಟ್ರಿಯ ಬಗ್ಗೆ ಮಾತನಾಡಿದ್ದಾರೆ. ಯಶ್ ಕೆಜಿಎಫ್ ಹಾಗೂ ಭರಾಟೆ ಚಿತ್ರಗಳ ಬಗ್ಗೆ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ. ಈ ವೇಳೆ ಭರಾಟೆ ಚಿತ್ರದ ದೃಶ್ಯಗಳನ್ನ ಕೂಡ ತೋರಿಸಿದ್ದಾರೆ.
ಹೈದರಾಬಾದ್ ನಲ್ಲಿ 'ಪೈಲ್ವಾನ್'ನನ್ನು ಭೇಟಿ ಮಾಡಿದ ಶ್ರೀಮುರಳಿ
ತಮಿಳು ನಟ ಅಜಿತ್ 'ವಿಶ್ವಾಸಂ' ಚಿತ್ರದ ಯಶಸ್ಸಿನ ನಂತರ ಹಿಂದಿಯ ಪಿಂಕ್ ಚಿತ್ರದ ರೀಮೇಕ್ ನಲ್ಲಿ ನಟಿಸುತ್ತಿದ್ದು, ಈ ಚಿತ್ರದ ಚಿತ್ರೀಕರಣಕ್ಕಾಗಿ ರಾಮೋಜಿ ಫಿಲಂ ಸಿಟಿಗೆ ಆಗಮಿಸಿದ್ದಾರೆ. ಈ ವೇಳೆ ಶ್ರೀಮುರಳಿ ಸಿಕ್ಕಿ ಅವರೊಂದಿಗೆ ಸ್ನೇಹಪೂರ್ವಕವಾಗಿ ಮಾತನಾಡಿದ್ದಾರೆ.
'ಭರಾಟೆ' ಮೆಚ್ಚಿದ ಬಾಲಿವುಡ್ ನಟ ಸುನೀಲ್ ಶೆಟ್ಟಿ
ಅಷ್ಟೇ ಅಲ್ಲದೇ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರನ್ನ ಕೂಡ ಶ್ರೀಮುರಳಿ ಭೇಟಿ ಮಾಡಿದ್ದಾರೆ. ಸುನಿಲ್ ಶೆಟ್ಟಿ ಪೈಲ್ವಾನ್ ಚಿತ್ರಕ್ಕಾಗಿ ಹೈದ್ರಾಬಾದ್ ಗೆ ಬಂದಿದ್ದಾರೆ. ಈ ವೇಳೆ ಅವರನ್ನ ಕೂಡ ರೋರಿಂಗ್ ಸ್ಟಾರ್ ಮೀಟ್ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಇನ್ನು ಶ್ರೀಮುರಳಿ ಮಾತ್ರವಲ್ಲದೇ ಕಿಚ್ಚ ಸುದೀಪ್, ಧ್ರುವ ಸರ್ಜಾ ಕೂಡ ಅಲ್ಲೇ ಇದ್ದಾರೆ. ಪೈಲ್ವಾನ್ ಚಿತ್ರೀಕರಣದಲ್ಲಿ ಸುದೀಪ್, ಪೊಗರು ಚಿತ್ರೀಕರಣದಲ್ಲಿ ಧ್ರುವ ಸರ್ಜಾ ಹಾಗೂ ಭರಾಟೆ ಚಿತ್ರೀಕರಣಕ್ಕಾಗಿ ಶ್ರೀಮುರಳಿ ರಾಮೋಜಿ ಫಿಲಂ ಸಿಟಿಯಲ್ಲಿದ್ದಾರೆ.