Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಡೋ ಮಾತ್ಮೇಲೆ ಜವಾಬ್ದಾರಿ ಇರಬೇಕು: ಶ್ರೀಮುರಳಿ ಹೇಳಿದ್ದು ಯಾರಿಗೆ?
'ಭರಾಟೆ' ಚಿತ್ರದಲ್ಲಿ ಬ್ಯುಸಿಯಾಗಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅದರ ಹಿಂದೆಯೇ 'ಮದಗಜ' ಚಿತ್ರವನ್ನ ಶುರು ಮಾಡಲಿದ್ದಾರೆ. ಮಫ್ತಿ ಸೂಪರ್ ಹಿಟ್ ಆದ ಬೆನ್ನಲ್ಲೆ ಶ್ರೀಮುರಳಿ ಮುಂದಿನ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ.
'ಭರ್ಜರಿ' ಚಿತ್ರದ ನಿರ್ದೇಶಕ ಚೇತನ್ ಕುಮಾರ್ 'ಭರಾಟೆ'ಗೆ ಆಕ್ಷನ್ ಕಟ್ ಹೇಳುತ್ತಿದ್ದು, ಈಗಾಗಲೇ ಮೇಕಿಂಗ್ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ಇದೀಗ, ಶ್ರೀಮುರಳಿ ತಮ್ಮ ಫೇಸ್ ಬುಕ್ ನಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ. ಶ್ರೀಮುರಳಿ ಅವರು ಯಾವುದೇ ಕಾಂಟ್ರುವರ್ಸಿ ಮಾಡಿಕೊಂಡಿಲ್ಲ. ಯಾವ ವಿವಾದಕ್ಕೂ ತಲೆಕೆಡಿಸಿಕೊಳ್ಳಲ್ಲ. ಯಾರ ವ್ಯಕ್ತಿತ್ವಕ್ಕೂ ಧಕ್ಕೆ ಆಗುವಂತೆ ಮಾತನಾಡಲ್ಲ. ಆದ್ರೆ, ರೋರಿಂಗ್ ಸ್ಟಾರ್ ಬರೆದಿರುವ ಸಾಲುಗಳು ಚರ್ಚೆಗೆ ಕಾರಣವಾಗಿದೆ.
ಪತಿಯ ಶ್ರಮ ಕಂಡು ಮತ್ತೆ ಪ್ರೀತಿಯಲ್ಲಿ ಬಿದ್ದ ವಿದ್ಯಾ ಶ್ರೀ ಮುರಳಿ
''ಆಡೋ ಮಾತ್ಮೇಲೆ ಜವಾಬ್ದಾರಿ ಇರಬೇಕು. ಕೊಟ್ಟ ಮೇಲೆ ಮಾತನ್ನ ಉಳಿಸಿಕೊಳ್ಳಬೇಕು ಅಲ್ವಾ?'' ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಹಾಗೆ ಸುಮ್ಮನೆ ಹೇಳಿದ್ದು (#HaagehSumneBardhe #HSB) ಹ್ಯಾಷ್ ಟ್ಯಾಗ್ ಬಳಸಿ Tc all ಎಂದಿದ್ದಾರೆ.
ಇನ್ನು ನಾಳೆಯಿಂದ ಭರಾಟೆ ಶೂಟಿಂಗ್ ಹೆಚ್ಚಿದೆ ಎಂದು ಅದೇ ಸ್ಟೇಟಸ್ ನಲ್ಲಿ ತಿಳಿಸಿದ್ದಾರೆ. ಅಂದ್ಹಾಗೆ, ಈ ಸ್ಟೇಟಸ್ ನಲ್ಲಿ ಅಂತಹ ವಿಶೇಷವೇನು ಇಲ್ಲ. ಬಹುಶಃ ಇದನ್ನ ಗಮನಿಸಿದ್ರೆ, ಇದು ಭರಾಟೆ ಚಿತ್ರದ ಡೈಲಾಗ್ ಇರಬಹುದು ಅನಿಸುತ್ತಿದೆ.