Don't Miss!
- Sports IPL 2024: ಗಾಯದ ಕಾರಣದಿಂದ ಆಟಗಾರ ಲೀಗ್ನಿಂದ ಹೊರ ನಡೆದರೆ ಸಿಗುವ ಹಣವೆಷ್ಟು?
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Automobiles ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಡೋ ಮಾತ್ಮೇಲೆ ಜವಾಬ್ದಾರಿ ಇರಬೇಕು: ಶ್ರೀಮುರಳಿ ಹೇಳಿದ್ದು ಯಾರಿಗೆ?
'ಭರಾಟೆ' ಚಿತ್ರದಲ್ಲಿ ಬ್ಯುಸಿಯಾಗಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅದರ ಹಿಂದೆಯೇ 'ಮದಗಜ' ಚಿತ್ರವನ್ನ ಶುರು ಮಾಡಲಿದ್ದಾರೆ. ಮಫ್ತಿ ಸೂಪರ್ ಹಿಟ್ ಆದ ಬೆನ್ನಲ್ಲೆ ಶ್ರೀಮುರಳಿ ಮುಂದಿನ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ.
'ಭರ್ಜರಿ' ಚಿತ್ರದ ನಿರ್ದೇಶಕ ಚೇತನ್ ಕುಮಾರ್ 'ಭರಾಟೆ'ಗೆ ಆಕ್ಷನ್ ಕಟ್ ಹೇಳುತ್ತಿದ್ದು, ಈಗಾಗಲೇ ಮೇಕಿಂಗ್ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ಇದೀಗ, ಶ್ರೀಮುರಳಿ ತಮ್ಮ ಫೇಸ್ ಬುಕ್ ನಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ. ಶ್ರೀಮುರಳಿ ಅವರು ಯಾವುದೇ ಕಾಂಟ್ರುವರ್ಸಿ ಮಾಡಿಕೊಂಡಿಲ್ಲ. ಯಾವ ವಿವಾದಕ್ಕೂ ತಲೆಕೆಡಿಸಿಕೊಳ್ಳಲ್ಲ. ಯಾರ ವ್ಯಕ್ತಿತ್ವಕ್ಕೂ ಧಕ್ಕೆ ಆಗುವಂತೆ ಮಾತನಾಡಲ್ಲ. ಆದ್ರೆ, ರೋರಿಂಗ್ ಸ್ಟಾರ್ ಬರೆದಿರುವ ಸಾಲುಗಳು ಚರ್ಚೆಗೆ ಕಾರಣವಾಗಿದೆ.
ಪತಿಯ ಶ್ರಮ ಕಂಡು ಮತ್ತೆ ಪ್ರೀತಿಯಲ್ಲಿ ಬಿದ್ದ ವಿದ್ಯಾ ಶ್ರೀ ಮುರಳಿ
''ಆಡೋ ಮಾತ್ಮೇಲೆ ಜವಾಬ್ದಾರಿ ಇರಬೇಕು. ಕೊಟ್ಟ ಮೇಲೆ ಮಾತನ್ನ ಉಳಿಸಿಕೊಳ್ಳಬೇಕು ಅಲ್ವಾ?'' ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಹಾಗೆ ಸುಮ್ಮನೆ ಹೇಳಿದ್ದು (#HaagehSumneBardhe #HSB) ಹ್ಯಾಷ್ ಟ್ಯಾಗ್ ಬಳಸಿ Tc all ಎಂದಿದ್ದಾರೆ.
ಇನ್ನು ನಾಳೆಯಿಂದ ಭರಾಟೆ ಶೂಟಿಂಗ್ ಹೆಚ್ಚಿದೆ ಎಂದು ಅದೇ ಸ್ಟೇಟಸ್ ನಲ್ಲಿ ತಿಳಿಸಿದ್ದಾರೆ. ಅಂದ್ಹಾಗೆ, ಈ ಸ್ಟೇಟಸ್ ನಲ್ಲಿ ಅಂತಹ ವಿಶೇಷವೇನು ಇಲ್ಲ. ಬಹುಶಃ ಇದನ್ನ ಗಮನಿಸಿದ್ರೆ, ಇದು ಭರಾಟೆ ಚಿತ್ರದ ಡೈಲಾಗ್ ಇರಬಹುದು ಅನಿಸುತ್ತಿದೆ.