Don't Miss!
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮೈಸೂರಿನಲ್ಲಿ ಶ್ರೀಮರಳಿ-ಶ್ರೀಲೀಲಾ 'ಭರಾಟೆ' ಡ್ಯುಯೆಟ್
ಸ್ಯಾಂಡಲ್ ವುಡ್ ನಲ್ಲಿ ಸದ್ಯ ಶ್ರೀಮುರಳಿ ಭರಾಟೆ ಜೋರಾಗಿದೆ. ಮೇಕಿಂಗ್ ಹಂತದಲ್ಲೇ ಸಿಕ್ಕಾಪಟ್ಟೆ ಸದ್ದುಮಾಡುತ್ತಿರುವ 'ಭರಾಟೆ' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಮೈಸೂರಿನ ಸುಂದರ ತಾಣಗಳಲ್ಲಿ ಶ್ರೀಮರಳಿ ಮತ್ತು ಶ್ರೀಲೀಲಾ ಅವರ ಕೆಲವು ದೃಶಗಳನ್ನು ಸೆರೆ ಹಿಡಿಯುವಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.
ಇತ್ತೀಚಿಗಷ್ಟೆ ಚಿತ್ರದ ಹೈ ವೋಲ್ಟೇಜ್ ಆಕ್ಷನ್ ದೃಶ್ಯ ಮತ್ತು ಅದ್ಧೂರಿ ಹಾಡಿನ ಚಿತ್ರೀಕರಣದ ಮೂಲಕ ಚಿತ್ರಾಭಿಮಾನಿಗಳ ಗಮನ ಸೆಳೆದಿತ್ತು ಭರಾಟೆ. ಸದ್ಯ ಮೈಸೂರಿನಲ್ಲಿ ಅದ್ಭುತ ಸೆಟ್ ಹಾಕಿ ಶ್ರೀಮುರುಳಿ ಮತ್ತು ಶ್ರೀಲೀಲಾ ಅವರ ಪ್ರಮುಖ ಭಾಗಗಳನ್ನು ಸೆರೆಹಿಯುತ್ತಿದೆ. ಈಗಾಗಲೆ 'ಭರಾಟೆ' ಟೀಂ ರಾಜಸ್ಥಾನ್, ಹೈದಾರಾಬಾದ್ ಮತ್ತು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿದೆ.
'ಮಫ್ತಿ' ಚಿತ್ರದ ನಂತರ ಶ್ರೀಮುರಳಿ 'ಭರಾಟೆ' ಮೂಲಕ ಅದ್ಧೂರಿ ಎಂಟ್ರಿ ಕೊಡಲು ಸಿದ್ಧರಾಗುತ್ತಿದ್ದಾರೆ. ಅಂದ್ಹಾಗೆ 'ಭರಾಟೆ' ಚೇತನ್ ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ. ಟೀಸರ್, ಫಸ್ಟ್ ಲುಕ್, ಕಾಸ್ಟ್ಯೂಮ್ ಮತ್ತು ಮೇಕಿಂಗ್ ಮೂಲಕ ಸಿನಿರಸಿಕರ ಗಮನ ಸೆಳೆದಿರುವ 'ಭರಾಟೆ' ಚಿತ್ರದಲ್ಲಿ 10 ಜನ ಖಡಕ್ ಖಳನಟರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ವಿಶೇಷ ಅಂದ್ರೆ ಸಾಯಿ ಕುಮಾರ್ ಸಹೋದರರಾದ ರವಿಶಂಕರ್ ಮತ್ತು ಅಯ್ಯಪ್ಪ ಶರ್ಮ ಮೂವರು ಒಟ್ಟಿಗೆ ಒಂದೇ ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. ಇನ್ನು ಟಾಲಿವುಡ್ ಸ್ಟಾರ್ ಜಗಪತಿ ಬಾಬು ಕೂಡ 'ಭಾರಟೆ' ಚಿತ್ರದ ಭಾಗವಾಗಿದ್ದಾರೆ. ಸಾಕಷ್ಟು ವಿಶೇಷತೆಗಳಿಂದ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ 'ಭರಾಟೆ' ಸಧ್ಯದಲ್ಲೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.