ಕಠಾರಿವೀರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು
ಮುನಿರತ್ನ ನಿರ್ಮಿಸಿರುವ ಉಪೇಂದ್ರ ಹಾಗೂ ರಮ್ಯಾ ಮುಖ್ಯಭೂಮಿಕೆಯಲ್ಲಿರುವ ಭಾರಿ ಬಜೆಟ್ ಹಾಗೂ ಕನ್ನಡದ ಮೊಟ್ಟಮೊದಲ ತ್ರೀಡಿ ಚಿತ್ರ ಎಂಬ ಖ್ಯಾತಿಗೆ ಒಳಗಾಗಿರುವ 'ಕಠಾರಿವೀರ ಸುರಸುಂದರಾಂಗಿ' ಚಿತ್ರದ ವಿರುದ್ಧ ಹಿಂದೂ ಸಂಘಟನೆಗಳು ತಿರುಗಿಬಿದ್ದಿವೆ. ಚಿತ್ರದಲ್ಲಿ ಹಿಂದೂ ದೇವತೆಗಳಿಗೆ ಅವಹೇಳನ ಮಾಡಲಾಗಿದೆ ಎಂದು ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆಗಳು ಆರೋಪಿಸಿವೆ.
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು 'ಕಠಾರಿವೀರ' ಚಿತ್ರದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಲಾಗಿದೆ. ದೇವಲೋಕದಲ್ಲಿ ಅರೆ ಬೆತ್ತಲೆ ಚಿತ್ರ ಚಿತ್ರಿಸಿ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಇಷ್ಟೇ ಅಲ್ಲದೆ ದೇವೇಂದ್ರನನ್ನು 'ಲೋ ಇಂದ್ರ' ಎಂದು ಕರೆಯಲಾಗಿದೆ. ಯಮಧರ್ಮನನ್ನು ಬ್ಲ್ಯಾಕ್ಮೇಲ್ ಮಾಡಿ ಅಪಮಾನ ಮಾಡಲಾಗಿದೆ. ಚಿತ್ರದಲ್ಲಿ ಯಾವುದೇ ಸಂದೇಶವಿಲ್ಲ ಎಂದು ಮುತಾಲಿಕ್ ಚಿತ್ರವನ್ನು ಖಂಡಿಸಿದ್ದಾರೆ. ಸೆನ್ಸಾರ್ ಮಂಡಳಿಗೆ ದೂರು ನೀಡುವುದಾಗಿಯೂ ಮುತಾಲಿಕ್ ಗುಡುಗಿದ್ದಾರೆ. (ಒನ್ಇಂಡಿಯಾ ಕನ್ನಡ)


Click it and Unblock the Notifications











