Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಠಾರಿವೀರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು
ಮುನಿರತ್ನ ನಿರ್ಮಿಸಿರುವ ಉಪೇಂದ್ರ ಹಾಗೂ ರಮ್ಯಾ ಮುಖ್ಯಭೂಮಿಕೆಯಲ್ಲಿರುವ ಭಾರಿ ಬಜೆಟ್ ಹಾಗೂ ಕನ್ನಡದ ಮೊಟ್ಟಮೊದಲ ತ್ರೀಡಿ ಚಿತ್ರ ಎಂಬ ಖ್ಯಾತಿಗೆ ಒಳಗಾಗಿರುವ 'ಕಠಾರಿವೀರ ಸುರಸುಂದರಾಂಗಿ' ಚಿತ್ರದ ವಿರುದ್ಧ ಹಿಂದೂ ಸಂಘಟನೆಗಳು ತಿರುಗಿಬಿದ್ದಿವೆ. ಚಿತ್ರದಲ್ಲಿ ಹಿಂದೂ ದೇವತೆಗಳಿಗೆ ಅವಹೇಳನ ಮಾಡಲಾಗಿದೆ ಎಂದು ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆಗಳು ಆರೋಪಿಸಿವೆ.
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು 'ಕಠಾರಿವೀರ' ಚಿತ್ರದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಲಾಗಿದೆ. ದೇವಲೋಕದಲ್ಲಿ ಅರೆ ಬೆತ್ತಲೆ ಚಿತ್ರ ಚಿತ್ರಿಸಿ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಇಷ್ಟೇ ಅಲ್ಲದೆ ದೇವೇಂದ್ರನನ್ನು 'ಲೋ ಇಂದ್ರ' ಎಂದು ಕರೆಯಲಾಗಿದೆ. ಯಮಧರ್ಮನನ್ನು ಬ್ಲ್ಯಾಕ್ಮೇಲ್ ಮಾಡಿ ಅಪಮಾನ ಮಾಡಲಾಗಿದೆ. ಚಿತ್ರದಲ್ಲಿ ಯಾವುದೇ ಸಂದೇಶವಿಲ್ಲ ಎಂದು ಮುತಾಲಿಕ್ ಚಿತ್ರವನ್ನು ಖಂಡಿಸಿದ್ದಾರೆ. ಸೆನ್ಸಾರ್ ಮಂಡಳಿಗೆ ದೂರು ನೀಡುವುದಾಗಿಯೂ ಮುತಾಲಿಕ್ ಗುಡುಗಿದ್ದಾರೆ. (ಒನ್ಇಂಡಿಯಾ ಕನ್ನಡ)