Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಬರ್ ಯುಗದೊಳ್ ಚಿತ್ರದ ವಿರುದ್ಧ ಪ್ರತಿಭಟನೆ
ಚಿತ್ರದಲ್ಲಿ ಹಿಂದು ವಿರೋಧಿ ದೃಶ್ಯಗಳಿವೆ ಎಂಬ ಬಗ್ಗೆ ಶ್ರೀರಾಮ ಯುವ ಸೇನೆ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಅವರು ಗುರುವಾರ (ಸೆ.27) ಬೆಂಗಳೂರು ಕೆ.ಜಿ. ರಸ್ತೆಯ ಅನುಪಮ ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಿದರು. ಹಾಗಾಗಿ ಸೆ.27ರ ಬೆಳಗಿನ ಚಿತ್ರ ಪ್ರದರ್ಶನ ರದ್ದಾಗಿದೆ.
'ಸೈಬರ್ ಯುಗದೊಳ್' ಚಿತ್ರದಲ್ಲಿನ ಆಕ್ಷೇಪಾರ್ಹ ಸನ್ನಿವೇಶಗಳನ್ನು ತೆಗೆಯಬೇಕು ಎಂದು ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದರು. ಚಿತ್ರದ ವಿರುದ್ಧವೂ ಘೋಷಣೆಗಳನ್ನು ಕೂಗಿದರು. ಶ್ರೀರಾಮ ಯುವ ಸೇನೆ ಒಕ್ಕೂಟದ ಪ್ರತಿಭಟನೆಗೆ ಸಿದ್ದರಾಮಚೈತನ್ಯ ಸ್ವಾಮಿ ಸಾಥ್ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಚಿತ್ರದ ನಿರ್ದೇಶಕ ಮಧುಚಂದ್ರ ಹಾಗೂ ನಟ ಗುರುನಂದನ್ ಅವರೂ ಆಗಮಿಸಿದ ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಬಳಿಕ ಸಿದ್ದರಾಮಚೈತನ್ಯ ಸ್ವಾಮಿಗಳ ನೇತೃತ್ವದಲ್ಲಿ ಶ್ರೀರಾಮ ಯುವ ಸೇನೆ ಒಕ್ಕೂಟದ ಕಾರ್ಯಕರ್ತರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದರು. ಚಿತ್ರ ವಿಮರ್ಶೆ ಓದಿ: ಸೈಬರ್ ಯುಗದೊಳ್.
'ಸೈಬರ್ ಯುಗದೊಳ್' ಚಿತ್ರ ಲಿವ್ ಇನ್ ರಿಲೇಷನ್ (ಸಹ ಜೀವನ) ಬಗ್ಗೆ ಬೆಳಕು ಚೆಲ್ಲುತ್ತದೆ. ಚಿತ್ರದ ಕಥಾವಸ್ತುವೇ ಲಿವ್ ಇನ್ ರಿಲೇಷನ್ ಶಿಪ್ ಆಗಿದ್ದು, ಚಿತ್ರದಲ್ಲಿನ ಈ ಅಂಶಗಳೇ ಶ್ರೀರಾಮ ಯುವ ಸೇನೆ ಒಕ್ಕೂಟದ ವಿರೋಧಕ್ಕೆ ಕಾರಣವಾಗಿವೆ. (ಒನ್ಇಂಡಿಯಾ ಕನ್ನಡ)