Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈಬರ್ ಯುಗದೊಳ್ ಚಿತ್ರದ ವಿರುದ್ಧ ಪ್ರತಿಭಟನೆ
ಚಿತ್ರದಲ್ಲಿ ಹಿಂದು ವಿರೋಧಿ ದೃಶ್ಯಗಳಿವೆ ಎಂಬ ಬಗ್ಗೆ ಶ್ರೀರಾಮ ಯುವ ಸೇನೆ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಅವರು ಗುರುವಾರ (ಸೆ.27) ಬೆಂಗಳೂರು ಕೆ.ಜಿ. ರಸ್ತೆಯ ಅನುಪಮ ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಿದರು. ಹಾಗಾಗಿ ಸೆ.27ರ ಬೆಳಗಿನ ಚಿತ್ರ ಪ್ರದರ್ಶನ ರದ್ದಾಗಿದೆ.
'ಸೈಬರ್ ಯುಗದೊಳ್' ಚಿತ್ರದಲ್ಲಿನ ಆಕ್ಷೇಪಾರ್ಹ ಸನ್ನಿವೇಶಗಳನ್ನು ತೆಗೆಯಬೇಕು ಎಂದು ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದರು. ಚಿತ್ರದ ವಿರುದ್ಧವೂ ಘೋಷಣೆಗಳನ್ನು ಕೂಗಿದರು. ಶ್ರೀರಾಮ ಯುವ ಸೇನೆ ಒಕ್ಕೂಟದ ಪ್ರತಿಭಟನೆಗೆ ಸಿದ್ದರಾಮಚೈತನ್ಯ ಸ್ವಾಮಿ ಸಾಥ್ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಚಿತ್ರದ ನಿರ್ದೇಶಕ ಮಧುಚಂದ್ರ ಹಾಗೂ ನಟ ಗುರುನಂದನ್ ಅವರೂ ಆಗಮಿಸಿದ ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಬಳಿಕ ಸಿದ್ದರಾಮಚೈತನ್ಯ ಸ್ವಾಮಿಗಳ ನೇತೃತ್ವದಲ್ಲಿ ಶ್ರೀರಾಮ ಯುವ ಸೇನೆ ಒಕ್ಕೂಟದ ಕಾರ್ಯಕರ್ತರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದರು. ಚಿತ್ರ ವಿಮರ್ಶೆ ಓದಿ: ಸೈಬರ್ ಯುಗದೊಳ್.
'ಸೈಬರ್ ಯುಗದೊಳ್' ಚಿತ್ರ ಲಿವ್ ಇನ್ ರಿಲೇಷನ್ (ಸಹ ಜೀವನ) ಬಗ್ಗೆ ಬೆಳಕು ಚೆಲ್ಲುತ್ತದೆ. ಚಿತ್ರದ ಕಥಾವಸ್ತುವೇ ಲಿವ್ ಇನ್ ರಿಲೇಷನ್ ಶಿಪ್ ಆಗಿದ್ದು, ಚಿತ್ರದಲ್ಲಿನ ಈ ಅಂಶಗಳೇ ಶ್ರೀರಾಮ ಯುವ ಸೇನೆ ಒಕ್ಕೂಟದ ವಿರೋಧಕ್ಕೆ ಕಾರಣವಾಗಿವೆ. (ಒನ್ಇಂಡಿಯಾ ಕನ್ನಡ)