'ಕ್ರಿಕೆಟ್ ದೇವರು' ಸಚಿನ್ ವಿರುದ್ಧ ಬಾಂಬ್ ಸಿಡಿಸಿದ ಶ್ರೀರೆಡ್ಡಿ ಟ್ರೋಲ್ಡ್
Recommended Video

ಇಷ್ಟು ದಿನ ಸಿನಿಮಾ ನಟರು, ನಿರ್ದೇಶಕರು ಹಾಗೂ ನಿರ್ಮಾಪಕರ ವಿರುದ್ಧ ಆರೋಪಗಳ ಸುರಿಮಳೆ ಮಾಡುತ್ತಿದ್ದ ತೆಲುಗು ನಟಿ ಶ್ರೀರೆಡ್ಡಿ ಈಗ 'ಕ್ರಿಕೆಟ್ ದೇವರು' ಸಚಿನ್ ತೆಂಡೂಲ್ಕರ್ ಅವರ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ಒಮ್ಮೆ ಹೈದರಾಬಾದ್ ಗೆ ಬಂದಿದ್ದಾಗ 'ಚಾರ್ಮಿಂಗ್ ಹುಡುಗಿ ಜೊತೆ ರೋಮ್ಯಾನ್ಸ್ ಮಾಡಿದ್ದರು ಎಂದು ಹೇಳುವ ಮೂಲಕ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿರುವ ಶ್ರೀರೆಡ್ಡಿ ''ರೋಮ್ಯಾಂಟಿಕ್ ಕ್ರಿಕೆಟರ್ ಎಂದೇ ಗುರುತಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಅವರು, ಹೈದರಾಬಾದ್ ಗೆ ಬಂದಿದ್ದಾಗ ಅವರ ಜೊತೆ ಚಾರ್ಮಿಂಗ್ ಹುಡುಗಿ ರೋಮ್ಯಾನ್ಸ್ ಮಾಡಿದ್ದಳು. ಚಾಮುಂಡೇಶ್ವರ್ ಸ್ವಾಮಿ ಇವರಿಗೆ ಮಧ್ಯವರ್ತಿಯಾಗಿದ್ದರು. ಗ್ರೇಟ್ ವ್ಯಕ್ತಿಗಳು ಅದ್ಭುತವಾಗಿ ಆಟವಾಡ್ತಾರೆ, ಅಂದ್ರೆ ರೋಮ್ಯಾನ್ಸ್ ಚೆನ್ನಾಗಿ ಮಾಡ್ತಾರೆ'' ಎಂದು ವ್ಯಂಗ್ಯ ಮಾಡಿದ್ದಾರೆ.

ಸಹಜವಾಗಿ ಇದು ಸಚಿನ್ ತೆಂಡೂಲ್ಕರ್ ಅಭಿಮಾನಿಗಳನ್ನ ಕೆರಳಿಸಿದೆ. ಇದು ಪ್ರಚಾರಕ್ಕಾಗಿ ಸಚಿನ್ ಅವರ ಹೆಸರನ್ನ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಶ್ರೀರೆಡ್ಡಿಯ ಈ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.
'ಸಚಿನ್ ಅವರ ಬಗ್ಗೆ ಮಾತನಾಡಲು ನಿಮಗೆ ನಾಚಿಕೆಯಾಗಬೇಕು. ನೀವು ನಿಜವಾದ ಭಾರತೀಯರಾಗಿದ್ದರೇ ಸಚಿನ್ ಬಗ್ಗೆ ಹೀಗೆ ಮಾತನಾಡುತ್ತಿರಲಿಲ್ಲ' ಎಂದು ಕಾಲೆಳೆಯುತ್ತಿದ್ದಾರೆ. 'ಇಷ್ಟು ದಿನ ನೀನು ಆರೋಪ ಮಾಡಿದ್ದಾಗ ಅದರಲ್ಲಿ ಏನೋ ವಿಷ್ಯವಿದೆ ಎಂದು ಕೊಂಡಿದ್ದೆ. ಆದ್ರೆ, ಇಂದು ನೀನು ಬರಿ ಸುಳ್ಳು ಎಂದು ಗೊತ್ತಾಗಿದೆ' ಎಂದು ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ.
ಕ್ರಿಕೆಟ್ ಜಗತ್ತಿನಲ್ಲಿ ಯಾವುದೇ ವಿವಾದಗಳಿಲ್ಲದೇ ದಶಕಗಳ ಕಾಲ ಭಾರತೀಯ ಕ್ರಿಕೆಟ್ ತಂಡದಲ್ಲಿ ಲೆಜೆಂಡ್ ಆಗಿ ಜೀವಿಸಿದ ವ್ಯಕ್ತಿ ಸಚಿನ್ ತೆಂಡೂಲ್ಕರ್. ಇಂತವರ ಮೇಲೆ ಆರೋಪ ಬಂದಿರುವ ನಿಜಕ್ಕೂ ಆಶ್ಚರ್ಯ ಉಂಟು ಮಾಡಿದೆ.


Click it and Unblock the Notifications











