Don't Miss!
- News ಆರ್ಥಿಕ ಸಾಮರ್ಥ್ಯ ಆಧರಿಸಿ ಮಗು ಸುಪರ್ದಿ ನಿರ್ಧರಿಸಲಾಗುವುದಿಲ್ಲ-ಹೈಕೋರ್ಟ್ ಆದೇಶ
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕ್ರಿಕೆಟ್ ದೇವರು' ಸಚಿನ್ ವಿರುದ್ಧ ಬಾಂಬ್ ಸಿಡಿಸಿದ ಶ್ರೀರೆಡ್ಡಿ ಟ್ರೋಲ್ಡ್
Recommended Video
ಇಷ್ಟು ದಿನ ಸಿನಿಮಾ ನಟರು, ನಿರ್ದೇಶಕರು ಹಾಗೂ ನಿರ್ಮಾಪಕರ ವಿರುದ್ಧ ಆರೋಪಗಳ ಸುರಿಮಳೆ ಮಾಡುತ್ತಿದ್ದ ತೆಲುಗು ನಟಿ ಶ್ರೀರೆಡ್ಡಿ ಈಗ 'ಕ್ರಿಕೆಟ್ ದೇವರು' ಸಚಿನ್ ತೆಂಡೂಲ್ಕರ್ ಅವರ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ಒಮ್ಮೆ ಹೈದರಾಬಾದ್ ಗೆ ಬಂದಿದ್ದಾಗ 'ಚಾರ್ಮಿಂಗ್ ಹುಡುಗಿ ಜೊತೆ ರೋಮ್ಯಾನ್ಸ್ ಮಾಡಿದ್ದರು ಎಂದು ಹೇಳುವ ಮೂಲಕ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ.
ಬಹುಭಾಷಾ ನಟಿ ಖುಷ್ಬೂ ಪತಿ ಸುಂದರ್ ವಿರುದ್ಧ ಶ್ರೀರೆಡ್ಡಿ ಫೈರ್
ಈ ಬಗ್ಗೆ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿರುವ ಶ್ರೀರೆಡ್ಡಿ ''ರೋಮ್ಯಾಂಟಿಕ್ ಕ್ರಿಕೆಟರ್ ಎಂದೇ ಗುರುತಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಅವರು, ಹೈದರಾಬಾದ್ ಗೆ ಬಂದಿದ್ದಾಗ ಅವರ ಜೊತೆ ಚಾರ್ಮಿಂಗ್ ಹುಡುಗಿ ರೋಮ್ಯಾನ್ಸ್ ಮಾಡಿದ್ದಳು. ಚಾಮುಂಡೇಶ್ವರ್ ಸ್ವಾಮಿ ಇವರಿಗೆ ಮಧ್ಯವರ್ತಿಯಾಗಿದ್ದರು. ಗ್ರೇಟ್ ವ್ಯಕ್ತಿಗಳು ಅದ್ಭುತವಾಗಿ ಆಟವಾಡ್ತಾರೆ, ಅಂದ್ರೆ ರೋಮ್ಯಾನ್ಸ್ ಚೆನ್ನಾಗಿ ಮಾಡ್ತಾರೆ'' ಎಂದು ವ್ಯಂಗ್ಯ ಮಾಡಿದ್ದಾರೆ.
ತಮಿಳು 'ಸ್ಟಾರ್' ನಟನ ಮೇಲೆ ಶ್ರೀರೆಡ್ಡಿ ಎನ್ ಕೌಂಟರ್.!
ಸಹಜವಾಗಿ ಇದು ಸಚಿನ್ ತೆಂಡೂಲ್ಕರ್ ಅಭಿಮಾನಿಗಳನ್ನ ಕೆರಳಿಸಿದೆ. ಇದು ಪ್ರಚಾರಕ್ಕಾಗಿ ಸಚಿನ್ ಅವರ ಹೆಸರನ್ನ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಶ್ರೀರೆಡ್ಡಿಯ ಈ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.
'ಸಚಿನ್ ಅವರ ಬಗ್ಗೆ ಮಾತನಾಡಲು ನಿಮಗೆ ನಾಚಿಕೆಯಾಗಬೇಕು. ನೀವು ನಿಜವಾದ ಭಾರತೀಯರಾಗಿದ್ದರೇ ಸಚಿನ್ ಬಗ್ಗೆ ಹೀಗೆ ಮಾತನಾಡುತ್ತಿರಲಿಲ್ಲ' ಎಂದು ಕಾಲೆಳೆಯುತ್ತಿದ್ದಾರೆ. 'ಇಷ್ಟು ದಿನ ನೀನು ಆರೋಪ ಮಾಡಿದ್ದಾಗ ಅದರಲ್ಲಿ ಏನೋ ವಿಷ್ಯವಿದೆ ಎಂದು ಕೊಂಡಿದ್ದೆ. ಆದ್ರೆ, ಇಂದು ನೀನು ಬರಿ ಸುಳ್ಳು ಎಂದು ಗೊತ್ತಾಗಿದೆ' ಎಂದು ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ.
ಅಲ್ಲು ಅರ್ಜುನ್ ಅಣ್ಣನ 'ಸ್ವಿಮ್ಮಿಂಗ್ ಪೂಲ್' ರಹಸ್ಯ ಬಿಚ್ಚಿಟ್ಟ ಶ್ರೀರೆಡ್ಡಿ
ಕ್ರಿಕೆಟ್ ಜಗತ್ತಿನಲ್ಲಿ ಯಾವುದೇ ವಿವಾದಗಳಿಲ್ಲದೇ ದಶಕಗಳ ಕಾಲ ಭಾರತೀಯ ಕ್ರಿಕೆಟ್ ತಂಡದಲ್ಲಿ ಲೆಜೆಂಡ್ ಆಗಿ ಜೀವಿಸಿದ ವ್ಯಕ್ತಿ ಸಚಿನ್ ತೆಂಡೂಲ್ಕರ್. ಇಂತವರ ಮೇಲೆ ಆರೋಪ ಬಂದಿರುವ ನಿಜಕ್ಕೂ ಆಶ್ಚರ್ಯ ಉಂಟು ಮಾಡಿದೆ.