Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮದಗಜ' ಮೂರನೇ ಹಂತದ ಚಿತ್ರೀಕರಣಕ್ಕೆ ಸಜ್ಜಾದ ಶ್ರೀಮುರಳಿ
ಮೈಸೂರಿನಲ್ಲಿ ಕಳೆದ ತಿಂಗಳು ಎರಡನೇ ಹಂತದ ಚಿತ್ರೀಕರಣ ಮುಗಿಸಿದ್ದ ಮದಗಜ ಸಿನಿಮಾತಂಡ ಈಗ ಮೂರನೇ ಹಂತದ ಶೂಟಿಂಗ್ಗೆ ಸಜ್ಜಾಗಿದೆ. ಡಿಸೆಂಬರ್ 1ನೇ ತಾರೀಕಿನಿಂದ ಬೆಂಗಳೂರಿನಲ್ಲಿ ಮೂರನೇ ಹಂತದ ಚಿತ್ರೀಕರಣ ಆರಂಭ ಮಾಡಲು ಮದಗಜ ಚಿತ್ರತಂಡ ಯೋಜನೆ ಹಾಕಿಕೊಂಡಿದೆಯಂತೆ.
ಬೆಂಗಳೂರಿನಲ್ಲಿ ಅದ್ಧೂರಿ ಸೆಟ್ ಹಾಕಿ ಮದಗಜ ಶೂಟಿಂಗ್ ಮಾಡುವ ಪ್ಲಾನ್ ಇದೆ. ಕಲಾ ನಿರ್ದೇಶಕ ಮೋಹನ್ ಬಿ ಕೆರೆ ಅವರು ಮಿನರ್ವ ಮಿಲ್ ಮತ್ತು ಎಚ್ ಎಂ ಟಿ ಫ್ಯಾಕ್ಟರಿಯಲ್ಲಿ ಸೆಟ್ ಹಾಕಲಿದ್ದಾರೆ.
ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣ ಮುಗಿಸಿದ 'ಮದಗಜ'
ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿರುವ ಮದಗಜ ಸಿನಿಮಾ ಪಕ್ಕಾ ಫ್ಯಾಮಿಲಿ ಆಕ್ಷನ್ ಡ್ರಾಮಾ ಆಗಿದ್ದು, ಶ್ರೀಮುರಳಿ ಅಭಿಮಾನಿಗಳಿಗೆ ಇದು ಇಷ್ಟ ಆಗಲಿದೆ ಎಂದು ಹೇಳಲಾಗಿದೆ.
ರಾಬರ್ಟ್ ಚಿತ್ರ ನಿರ್ಮಿಸಿರುವ ಉಮಾಪತಿ ಶ್ರೀನಿವಾಸ್ ಮದಗಜ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಮೊದಲ ಸಲ ಮಹೇಶ್ ಕುಮಾರ್ ಹಾಗೂ ಶ್ರೀಮುರಳಿ ಜೊತೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ವಾರಣಾಸಿಯಲ್ಲಿ ಮೊದಲ ಹಂತದ ಶೂಟಿಂಗ್ ಮುಗಿದಿತ್ತು. ನಂತರ ಮೈಸೂರಿನಲ್ಲಿ ಎರಡನೇ ಹಂತದ ಶೂಟಿಂಗ್ ಮಾಡಲಾಗಿತ್ತು.
ಚಿತ್ರದಲ್ಲಿ ಶ್ರೀಮುರಳಿಗೆ ಆಶಿಕಾ ರಂಗನಾಥ್ ಜೋಡಿಯಾಗಲಿದ್ದು. ತೆಲುಗು ನಟ ಜಗಪತಿ ಬಾಬು ಪ್ರಮುಖ ಖಳನಾಯಕನ ಪಾತ್ರ ನಿರ್ವಹಿಸಲಿದ್ದಾರೆ. ಸುಮಾರು 20 ವರ್ಷದ ನಂತರ ದಕ್ಷಿಣ ಭಾರತದ ಖ್ಯಾತ ನಟಿ ದೇವಯಾನಿ ಕನ್ನಡ ಚಿತ್ರರಂಗಕ್ಕೆ ಮದಗಜ ಚಿತ್ರದ ಮೂಲಕ ಕಂಬ್ಯಾಕ್ ಆಗುತ್ತಿದ್ದಾರೆ.
ಶ್ರೀಮುರಳಿ ನಟನೆಯ 'ಮದಗಜ' ಚಿತ್ರದ ಬಜೆಟ್ ಎಷ್ಟು?
Recommended Video
ಅಂದ್ಹಾಗೆ, ಮದಗಜ ಚಿತ್ರಕ್ಕೆ ನವೀನ್ ಕುಮಾರ್ ಅವರು ಛಾಯಾಗ್ರಹಣವಿದ್ದು, ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಚೇತನ್ ಕುಮಾರ್, ರವಿಬಸ್ರೂರು ಈ ಚಿತ್ರಕ್ಕೆ ಸಾಹಿತ್ಯ ರಚಿಸಲಿದ್ದಾರೆ.