'ಅಪ್ಪಯ್ಯ'ನ ಅಪ್ಪಾಲೆತಿಪ್ಪಾಲೆಗೆ ಚಿತ್ರಮಂದಿರಗಳು ಸಜ್ಜು
'ಅಪ್ಪಯ್ಯ'ನ ಆಟಕ್ಕೆ ಚಿತ್ರಮಂದಿರಗಳು ಸಜ್ಜಾಗಿವೆ. ಒಂದು ನೈಜ ಕಥೆಯನ್ನು ಅಷ್ಟೇ ಸರಳವಾಗಿ ನಿರೂಪಿಸಿ ಮನಸ್ಸಿಗೆ ಹಾಗೂ ಹೃದಯಕ್ಕೆ ಹತ್ತಿರವಾಗುವಂತೆ ಚಿತ್ರೀಕರಣ ಮಾಡಿದ್ದಾರೆ ಖ್ಯಾತ ನಿರ್ದೇಶಕ ಎಸ್ ನಾರಾಯಣ್. ಅವರ ನಿರ್ದೇಶನದ ಅಪ್ಪಯ್ಯ ಚಿತ್ರ ಈ ವಾರ (ಸೆ.13) ಬಿಡುಗಡೆಯಾಗುತ್ತಿದೆ.
ಈ ಬಾರಿ ಎಸ್ ನಾರಾಯಣ್ ಅವರು ನಿಜ ಜೀವನದಲ್ಲಿ ನಡೆದಿರುವ ಘಟನೆಗಳನ್ನೇ ಕಥೆಯಾಗಿಸಿದ್ದಾರೆ. ಜನಪ್ರಿಯ ನಾಯಕ ಶ್ರೀನಗರ ಕಿಟ್ಟಿ ಹಾಗೂ ಸುಂದರ ಚೆಲುವೆ ಭಾಮಾ ಅವರ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ಶ್ರೀಮತಿ ಭಾಗ್ಯವತಿ ಕಂಬೈನ್ಸ್ ಅಡಿಯಲ್ಲಿ ಭಾಗ್ಯವತಿ ಹಾಗೂ ಪವನ್ ಕಾರ್ತಿಕ್ ಅವರು ನಿರ್ಮಾಣ ಮಾಡಿದ್ದಾರೆ.
ಎಸ್ ನಾರಾಯಣ ಅವರ ಈ ಮಹತ್ವಾಕಾಂಕ್ಷೆಯ ಚಿತ್ರ ಸೆನ್ಸಾರ್ ಮಂಡಲಿಯಿಂದ ಯು/ಎ ಪಡೆದಿದೆ. ಯಶಸ್ವಿ ಚಿತ್ರಗಳ ನಿರ್ದೇಶಕ, ನಿರ್ಮಾಪಕ, ನಟ ಎಸ್ ನಾರಾಯಣ್ ಅವರು ಈ ಸಲ 'ಅಪ್ಪಯ್ಯ' ಚಿತ್ರೀಕರಣಕ್ಕೆ ಹಳ್ಳಿಗಾಡಿನ ಪರಿಸರ ಆರಿಸಿಕೊಂಡಿದ್ದಾರೆ.ಎಸ್ ನಾರಾಯಣ್ ಹಾಗೂ ಕವಿರಾಜ್ ಅವರ ಸಾಹಿತ್ಯವಿದೆ. ಹಾಡುಗಳನ್ನು ಎಸ್ ನಾರಾಯಣ್ ಅವರು ರಾಗ ಸಂಯೋಜನೆ ಮಾಡಿದ್ದಾರೆ. ಧರ್ಮ ವಿಶ್ ಅವರು ಹಿನ್ನಲೆ ಸಂಗೀತವನ್ನು ಕೊಟ್ಟಿದ್ದಾರೆ.
ಆಶರಾಣಿ, ಇಂದ್ರಕುಮಾರ್, ಸುರೇಶ್ ಚಂದ್ರ, ನಂದ ಹಾಗೂ ಇನ್ನಿತರರು ಇರುವ ಈ ಚಿತ್ರಕ್ಕೆ ಜಗದೀಶ್ ವಾಲಿ ಅವರ ಛಾಯಾಗ್ರಹ ಇದೆ. ಡಿಫರೆಂಟ್ ಡ್ಯಾನಿ ಅವರ ಸಾಹಸ ಸಂಯೋಜನೆಯು ಚಿತ್ರದ ಪ್ರಮುಖ ಅಂಶ. (ಒನ್ಇಂಡಿಯಾ ಕನ್ನಡ)


Click it and Unblock the Notifications












