Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೈಮಂಡ್ ಸ್ಟಾರ್ ಕಿಟ್ಟಿಗೆ ಎಸ್.ಮಹೇಂದರ್ ಆಕ್ಷನ್ ಕಟ್
ತುಪ್ಪದ ಬೆಡಗಿ ರಾಗಿಣಿ ಜೊತೆ 'ನಮಸ್ತೆ ಮೇಡಂ' ಮತ್ತು 'ಅಭಿನೇತ್ರಿ' ಚಿತ್ರದ ಹಾಡೊಂದರಲ್ಲಿ ಬಿಟ್ಟರೆ ಗಾಂಧಿನಗರದ ಅಂಗಳದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದೇ ಇಲ್ಲ. 'ಸುಬ್ರಮಣಿ', 'ಶಂಕ್ರ' ಸೇರಿದಂತೆ ಕೈಯಲ್ಲಿ ಮೂರ್ನಾಲ್ಕು ಸಿನಿಮಾಗಳನ್ನ ಇಟ್ಟೊಂಡಿರುವ ನಟ ಶ್ರೀನಗರ ಕಿಟ್ಟಿ ಈಗ ಹೊಸ ಸಿನಿಮಾವೊಂದನ್ನ ಒಪ್ಪಿಕೊಂಡಿದ್ದಾರೆ.
ಅದು ನಿರ್ದೇಶಕ ಎಸ್.ಮಹೇಂದರ್ ಜೊತೆ. ವರ್ಷಗಳ ನಂತರ ಎಸ್.ಮಹೇಂದರ್ 'ಮಹಾಕಾಳಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸೆಂಟಿಮೆಂಟ್ ಚಿತ್ರಗಳಿಂದಲೇ ಗುರುತಿಸಿಕೊಂಡಿದ್ದ ಎಸ್.ಮಹೇಂದರ್, ಹೆಣ್ ಚಿರತೆ ಮಾಲಾಶ್ರೀಗಾಗಿ ಆಕ್ಷನ್ ಸಿನಿಮಾ ನಿರ್ದೇಶಿಸಿದ್ದಾರೆ.
'ಮಹಾಕಾಳಿ' ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿದೆ. ಅಷ್ಟರಲ್ಲಾಗಲೇ ಎಸ್.ಮಹೇಂದರ್, ಕಿಟ್ಟಿ ಜೊತೆ ಹೊಸ ಪ್ರಾಜೆಕ್ಟ್ ಗೆ ಕೈಹಾಕಿದ್ದಾರೆ. ರೋಮ್ಯಾಂಟಿಕ್-ಲವ್ ಸ್ಟೋರಿ ಇರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ ಕೃತಿ ಖರಬಂಧ ನಾಯಕಿ ಆಗುವ ಸಾಧ್ಯತೆಗಳಿವೆ. [ಡೈಮಂಡ್ ಸ್ಟಾರ್ ಶ್ರೀನಗರ ಕಿಟ್ಟಿ ಬೇಸರಕ್ಕೆ ಕಾರಣವೇನು?]
ಈ ಬಗ್ಗೆ ಆಗಲೇ ಕೃತಿ ಖರಬಂಧ ಜೊತೆ ಮಾತುಕತೆ ನಡೆದಿದ್ದು, ಡೇಟ್ಸ್ ಫೈನಲೈಸ್ ಆಗಬೇಕಿದೆ. ಹೊಸ ನಿರ್ಮಾಪಕರೊಬ್ಬರು ಇನ್ನೂ ಹೆಸರಿಡದ ಈ ಚಿತ್ರಕ್ಕೆ ಬಂಡವಾಳ ಹಾಕುವುದಕ್ಕೆ ಮುಂದೆ ಬಂದಿದ್ದಾರೆ. ಸದ್ಯದಲ್ಲೇ ಚಿತ್ರ ಸೆಟ್ಟೇರಲಿದೆ. (ಏಜೆನ್ಸೀಸ್)