Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟ ವಿಕ್ರಂ ಚಿತ್ರಕ್ಕೆ ನಾಯಕಿಯಾದ 'ಕೆಜಿಎಫ್' ನಟಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿ ಅದೃಷ್ಟ ಬದಲಾಗುತ್ತೆ. ಭಾರತದ ದೊಡ್ಡ ನಟರ ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಗಲಿದೆ ಎಂಬ ಮಾತುಗಳಿತ್ತು. ಆದರೆ, ಕೆಜಿಎಫ್ ರಿಲೀಸ್ ಆಗಿ ಬಹುದೊಡ್ಡ ಸಕ್ಸಸ್ ಕಂಡರೂ ಶ್ರೀನಿಧಿ ಶೆಟ್ಟಿ ಯಾವ ಹೊಸ ಸಿನಿಮಾದ ಬಗ್ಗೆಯೂ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
Recommended Video
ಕೆಜಿಎಫ್ 2 ಚಿತ್ರದಲ್ಲಿ ಮತ್ತೆ ಬ್ಯುಸಿ ಆದ ಶ್ರೀನಿಧಿ ಶೆಟ್ಟಿ ಬಹುಶಃ ಈ ಸಿನಿಮಾ ಮುಗಿಸುವವರೆಗೂ ಬೇರೆ ಯಾವ ಸಿನಿಮಾನೂ ಮಾಡಬಾರದು ಎಂದು ನಿರ್ಧರಿಸಬಹುದು ಎಂಬ ಊಹೆ ಇತ್ತು.
ಆದ್ರೀಗ, ಈ ಎಲ್ಲ ನಿರೀಕ್ಷೆ, ಊಹೆಗಳಿಗೆ ಸ್ವತಃ ಶ್ರೀನಿಧಿ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. ಹೌದು, ತಮಿಳು ಸೂಪರ್ ಸ್ಟಾರ್ ಚಿಯಾನ್ ವಿಕ್ರಂ ಅವರ ಮುಂದಿನ ಚಿತ್ರದಲ್ಲಿ ನಾಯಕಿಯಾಗಿ ಆಯ್ಕೆಯಾಗಿರುವ ಬಗ್ಗೆ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ.
ಕ್ರಿಕೆಟಿಗ ಇರ್ಫಾನ್ ಪಠಾನ್ ಮೊದಲ ಸಿನಿಮಾಗೆ ನಾಯಕಿಯಾದ ಕನ್ನಡತಿ
ವಿಕ್ರಂ ನಟಿಸುತ್ತಿರುವ 58ನೇ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಈ ಚಿತ್ರವನ್ನ ಅಜಯ್ ಜ್ಞಾನಮುತ್ತು ನಿರ್ದೇಶಿಸುತ್ತಿದ್ದಾರೆ. ಮುಖ್ಯ ಪಾತ್ರದಲ್ಲಿ ಭಾರತದ ಕ್ರಿಕೆಟಿಗ ಇರ್ಫಾನ್ ಪಠಾಣ್ ಕೂಡ ಅಭಿನಯಿಸುತ್ತಿದ್ದಾರೆ.
''ವಿಕ್ರಂ ಅವರ 58ನೇ ಚಿತ್ರದಲ್ಲಿ ನಟಿಸಲು ಕಾತುರದಿಂದ ಕಾಯುತ್ತಿದ್ದೇನೆ. ಎ.ಆರ್ ರೆಹಮಾನ್ ಸಂಗೀತ ಬಗ್ಗೆ ಥ್ರಿಲ್ ಆಗಿದ್ದೀನಿ. ಈ ಅವಕಾಶ ಕೊಟ್ಟ ಅಜಯ್ ಜ್ಞಾನಮುತ್ತ ಸರ್ ಥ್ಯಾಂಕ್ ಯೂ'' ಎಂದು ಶ್ರೀನಿಧಿ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
ಸದ್ಯ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ನಟಿಸುತ್ತಿರುವ ಶ್ರೀನಿಧಿ ಶೆಟ್ಟಿ, ಮುಂದಿನ ವಾರದಿಂದಲೇ ತಮಿಳು ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಎರಡೂ ಚಿತ್ರವನ್ನ ಒಟ್ಟಿಗೆ ಬ್ಯಾಲೆನ್ಸ್ ಮಾಡಲಿದ್ದಾರಂತೆ.