Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಡೆ ಮಹಾಕಾಳಮ್ಮನ ಮೇಲೆ ಅದ್ಹೇಗೆ 'ಗಜ-ಸೃಜ'ಗೆ ಅಪಾರ ನಂಬಿಕೆ.?
Recommended Video
ಎಲ್ಲರಿಗೂ ಗೊತ್ತಿರುವ ಹಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಟಾಕಿಂಗ್ ಸ್ಟಾರ್ ಸೃಜನ್ ಪ್ರಾಣಿ ಪ್ರಿಯರು... ಪರಿಸರ ಪ್ರೇಮಿಗಳು... ಹಾಗೇ, ಇವರಿಬ್ಬರಿಗೂ ದೇವರ ಮೇಲೆ ಅಪಾರ ನಂಬಿಕೆ ಇದೆ.
ಆಸ್ತಿಕರಾಗಿರುವ 'ಗಜ' ಮತ್ತು 'ಸೃಜ' ಒಟ್ಟಿಗೆ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿರುವ ಉದಾಹರಣೆ ಇದೆ. ವಿಶೇಷವಾಗಿ ಬೆಂಗಳೂರಿನ ಶ್ರೀನಗರದಲ್ಲಿರುವ ಬಂಡೆ ಮಹಾಕಾಳಮ್ಮನ ಮೇಲೆ ದರ್ಶನ್ ಮತ್ತು ಸೃಜನ್ ಗೆ ಬೆಟ್ಟದಷ್ಟು ಭಕ್ತಿಯಿದೆ.
ಬಂಡೆ ಮಹಾಕಾಳಮ್ಮ ದೇವಸ್ಥಾನದ ಅರ್ಚಕರಿಗೆ ಇತ್ತೀಚೆಗಷ್ಟೇ ನಟ ದರ್ಶನ್ ನಾಯಿ ಮರಿಗಳನ್ನು ನೀಡಿದ್ದರು. ಇದೀಗ ಅದೇ ದೇವಸ್ಥಾನಕ್ಕೆ ಹೆಬ್ಬಾಗಿಲನ್ನು ನಿರ್ಮಿಸಿ ಕೊಟ್ಟಿದ್ದಾರೆ ನಟ ಸೃಜನ್ ಲೋಕೇಶ್.
ಬಂಡೆ ಮಹಾಕಾಳಮ್ಮ ದೇವಸ್ಥಾನಕ್ಕೂ, ಗಜ ಹಾಗೂ ಸೃಜನಿಗೂ ಇರುವ ನಂಟಿನ ಬಗ್ಗೆ ಸ್ವತಃ ಸೃಜನ್ ಲೋಕೇಶ್ ಬಾಯ್ಬಿಟ್ಟಿದ್ದಾರೆ. ಮುಂದೆ ಓದಿರಿ...
ಸೃಜನ್ ಜನ್ಮದಿನ
ನಟ ಸೃಜನ್ ಲೋಕೇಶ್ ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಬಂಡೆ ಮಹಾಕಾಳಮ್ಮ ದೇವಸ್ಥಾನಕ್ಕಾಗಿ ಹೆಬ್ಬಾಗಿಲನ್ನು ನಿರ್ಮಿಸಿದ್ದ ಸೃಜನ್ ಇಂದು ಜನ್ಮದಿನದ ಪ್ರಯುಕ್ತ ಅದರ ಉದ್ಘಾಟನೆ ಕಾರ್ಯವನ್ನ ನೆರವೇರಿಸಿದರು.
ಬಂಡಿ ಮಹಾ ಕಾಳಿಯಮ್ಮ ದೇವಾಲಯಕ್ಕೆ ದರ್ಶನ್ ಕೊಟ್ಟ ಕಾಣಿಕೆ
ಬಂಡೆಮಹಾಕಾಳಮ್ಮ ದೇವಿ ಮೇಲೆ ನಂಬಿಕೆ
''ಚಿಕ್ಕವಯಸ್ಸಿನಿಂದಲೂ ಈ ದೇವಸ್ಥಾನಕ್ಕೆ ಬರ್ತಿದ್ವಿ. ಇಲ್ಲಿಗೆ ಬಂದಾಗೆಲ್ಲ ನನಗೆ ಪಾಸಿಟಿವ್ ಅನ್ಸುತ್ತೆ. ಈ ದೇವಸ್ಥಾನಕ್ಕೆ ಬಂದು ಹೋದಾಗೆಲ್ಲ ನಾನೇನು ಅಂದುಕೊಂಡಿರುತ್ತೇನೋ, ಅದೆಲ್ಲ ಸಲೀಸಾಗಿ ನಡೆದು ಹೋಗುತ್ತದೆ. ದೇವಸ್ಥಾನಕ್ಕೆ ಏನಾದರೂ ಮಾಡಬೇಕು ಅಂತ ಅಂದುಕೊಳ್ಳುತ್ತಿದ್ದೆ. ತಾತ ಹಾಗೂ ಅಪ್ಪನ ಹೆಸರಿನಲ್ಲಿ ಶಾಶ್ವತವಾಗಿ ದೇವಸ್ಥಾನದ ಹೆಬ್ಬಾಗಿಲು ಇರಲಿ ಅಂತ ನಮ್ಮ ಸಂಸ್ಥೆಯಿಂದ ನಿರ್ಮಿಸಿ ಕೊಟ್ಟಿದ್ದೇವೆ'' ಅಂತಾರೆ ನಟ ಸೃಜನ್ ಲೋಕೇಶ್
ಜನ್ಮದಿನದಂದು ನಟ ಸೃಜನ್ ಲೋಕೇಶ್ ಮಾಡಿದ ಮಹತ್ವದ ಕಾರ್ಯ 'ಇದು'.!
ಗಜ ಜೊತೆಗೆ ಸೃಜ ಸಾಥ್
''ದರ್ಶನ್ ಕೂಡ ನನಗೆ ಸಾಥ್ ಕೊಟ್ಟು ಹೆಬ್ಬಾಗಿಲ ಪೇಂಟಿಂಗ್ ಜವಾಬ್ದಾರಿ ಹೊತ್ತರು. 'ಗಜ' ಹಾಗೂ 'ಸೃಜ' ಇಬ್ಬರೂ ಒಟ್ಟಿಗೆ ಸೇರಿ ಬಂಡೆಮಹಾಕಾಳಮ್ಮ ದೇವಸ್ಥಾನದ ಹೆಬ್ಬಾಗಿಲು ನಿರ್ಮಿಸಿದ್ದೇವೆ. ಇದೇ ಖುಷಿ ನನಗೆ'' - ಸೃಜನ್ ಲೋಕೇಶ್
ದೇವಿ ಮೇಲೆ ದರ್ಶನ್ ಗೂ ನಂಬಿಕೆ ಇದೆ
''ದರ್ಶನ್ ಗೆ ಕೂಡ ಈ ದೇವಸ್ಥಾನದ ಮೇಲೆ ನಂಬಿಕೆ ಇದೆ. ಅವರಿಗೂ ಇಲ್ಲಿಗೆ ಬಂದಾಗ ಪಾಸಿಟಿವ್ ಫೀಲ್ ಆಗಿದೆ. ಸುಸ್ತಾದಾಗ, ಬೇಜಾರಾದಾಗ ಇಲ್ಲಿಗೆ ಬಂದು, ಪೂಜೆ ಮಾಡಿಸಿಕೊಂಡು ಹೋದ ತಕ್ಷಣ ಅವರಿಗೆ ಫ್ರೆಶ್ ಅನ್ಸುತ್ತೆ'' ಎನ್ನುತ್ತಾರೆ ಸೃಜನ್ ಲೋಕೇಶ್.