Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಜನ ಯಜಮಾನ ನೋಡಿದ ಸೃಜಾ ಫುಲ್ ಖುಷಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿದ್ದ ಯಜಮಾನ ಸಿನಿಮಾ ರಿಲೀಸ್ ಆಗಿದ್ದು, ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಿದೆ. ಮಾರ್ಚ್ 1 ರಂದು ತೆರೆಕಂಡಿದ್ದ ಈ ಚಿತ್ರವನ್ನ ದರ್ಶನ್ ಆಪ್ತ ಗೆಳೆಯ ಸೃಜನ್ ಲೋಕೇಶ್ ನೋಡಿ ಮೆಚ್ಚಿಕೊಂಡಿದ್ದಾರೆ.
ಇತ್ತೀಚಿಗಷ್ಟೆ ಯಜಮಾನ ಸಿನಿಮಾವನ್ನ ನೋಡಿದ ಸೃಜನ್ ಲೋಕೇಶ್ ತಮ್ಮ ಟ್ವಿಟ್ಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ''ಯಜಮಾನ ಬಹಳ ಅಚ್ಚುಕಟ್ಟಾಗಿ ಮೂಡಿಬಂದಿದೆ. ಸಂಗೀತ, ಕಥೆ ತುಂಬಾ ಇಷ್ಟ ಆಯ್ತು. ನಮ್ಮ ಪ್ರೀತಿಯ ದರ್ಶನ್ ಪರ್ಫಾಮೆನ್ಸ್ ಸಖತ್ ಆಗಿದೆ. ಇಡೀ ಚಿತ್ರತಂಡಕ್ಕೆ ಶುಭಾಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಯಜಮಾನ ಚಿತ್ರವನ್ನ ಹರಿಕೃಷ್ಣ ಮತ್ತು ಪಿ ಕುಮಾರ್ ನಿರ್ದೇಶನ ಮಾಡಿದ್ದು, ಶೈಲಜಾ ನಾಗ್ ನಿರ್ಮಿಸಿದ್ದಾರೆ, ರಶ್ಮಿಕಾ ಮಂದಣ್ಣ ಮತ್ತು ತಾನ್ಯ ಹೋಪ್ ನಾಯಕಿಯರಾಗಿ ನಟಿಸಿದ್ದು, ದೇವರಾಜ್, ಠಾಕೂರ್ ಅನೂಪ್ ಸಿಂಗ್, ಧನಂಜಯ್, ಸಾಧುಕೋಕಿಲಾ ನಟಿಸಿದ್ದಾರೆ.
ಇನ್ನುಳಿದಂತೆ ಸೃಜನ್ ಲೋಕೇಶ್ 'ಎಲ್ಲಿದ್ದೆ ಇಲ್ಲಿ ತನಕ' ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ತಮ್ಮದೇ ಬ್ಯಾನರ್ ನಲ್ಲಿ ನಿರ್ಮಿಸುತ್ತಿದ್ದಾರೆ. ನಟಿ ಹರಿಪ್ರಿಯಾ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.