Don't Miss!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ಜಾ ಆಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಶ್ರುತಿ
Recommended Video
ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ಸಮರ ಮುಂದುವರೆದಿದೆ. ಈಗ ನಟ ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರ್ಗಿ ಅವರ ಮೇಲೆ ಶ್ರುತಿ ಹರಿಹರನ್ ದೂರು ನೀಡಿದ್ದಾರೆ.
ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರನ್ನು ಕರೆಸಿ ಮಾತುಕತೆ ಮಾಡಲಾಯಿತು. ನಟ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದ ಈ ಸಭೆ ವಿಫಲವಾಗಿತ್ತು. ಇಬ್ಬರೂ ಸಂಧಾನಕ್ಕೆ ಒಪ್ಪದ ಕಾರಣ ನಿನ್ನೆ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಂಡಿರಲಿಲ್ಲ.
ಶ್ರುತಿ ಹರಿಹರನ್ ವಿವಾದ: ಇಂದು ಪ್ರಶಾಂತ್ ಸಂಬರ್ಗಿ ಇಂದ ಸಿಡಿಯಲಿದೆ ಹೊಸ ಬಾಂಬ್.!
ಆದರೆ, ನಿನ್ನೆ ಸಭೆಯ ನಂತರ ಶ್ರುತಿ ಹರಿಹರನ್ ಇನ್ನೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ನಿನ್ನೆ ಮಧ್ಯರಾತ್ರಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸರ್ಜಾ ಆಪ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ್ದಾರೆ.
''ಮಾಧ್ಯಮಗಳ ಜೊತೆಗೆ ಮಾತನಾಡುವಾಗ ಪ್ರಶಾಂತ್ ಸಂಬರ್ಗಿ, ನಾನು ಹಿಂದೂ ಧರ್ಮದ ವಿರೋಧಿ ಎಂದು ಹೇಳಿ ಒಂದು ಸಮುದಾಯವನ್ನು ನನ್ನ ವಿರುದ್ಧ ಎತ್ತಿ ಕಟ್ಟಿದ್ದಾರೆ. ಜೊತೆಗೆ ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ.'' ಎಂದು ದೂರಿನಲ್ಲಿ ಶ್ರುತಿ ಉಲ್ಲೇಖ ಮಾಡಿದ್ದಾರೆ.
ಸರ್ಜಾ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಳಸಂಚು: ಸ್ಫೋಟಕ ಸುದ್ದಿ ನೀಡಿದ ಪ್ರಶಾಂತ್ ಸಂಬರ್ಗಿ
ಈಗಾಗಲೇ ಅರ್ಜುನ್ ಸರ್ಜಾ, ಶ್ರುತಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದು, ಈಗ ಶೃತಿ ಹರಿಹರನ್ ತಮ್ಮ ವಕೀಲ ತಂಡದ ಜೊತೆಗೆ ಹೋಗಿ ಪೊಲೀಸರಿಗೆ ದೂರು ನೀಡಿ ಬಂದಿದ್ದಾರೆ.