Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರು ಸರ್ಜಾ ನಿಧನಕ್ಕೆ ನಟಿ ಶ್ರುತಿ ಹರಿಹರನ್ ಸಂತಾಪ
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನು ನೆನಪು ಮಾತ್ರ. ಚಿರು ಸರ್ಜಾ ದಿಢೀರ್ ಸಾವು ಇಡೀ ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಚಿಕ್ಕ ವಯಸ್ಸಿನಲ್ಲಿಯೆ ಜೀವನದ ಪಯಣ ನಿಲ್ಲಿಸಿ ಬಾರದ ಲೋಕಕ್ಕೆ ಹೊರಟುಹೋಗಿದ್ದಾರೆ. ಚಿರು ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.
Recommended Video
ಸ್ಯಾಂಡಲ್ ವುಡ್ ಮಾತ್ರವಲ್ಲ ಪರಭಾಷೆ ಚಿತ್ರರಂಗದವರು ಚಿರು ಸರ್ಜಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಪೃಥ್ವಿರಾಜ್, ಅಲ್ಲು ಸಿರೀಶ್, ಖುಷ್ಬೂ, ನಾಜರಿಯಾ ಸೇರಿದ್ದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೂನ್ 7 ಮಧ್ಯಾಹ್ನ ಹೃದಯಾಘಾತದಿಂದ ಚಿರು ಕೊನೆಯುಸಿರೆಳೆದಿದ್ದಾರೆ. ಚಿರು ಸಾವಿಗೆ ನಟಿ ಶ್ರುತಿ ಹರಿಹರನ್ ಸಹ ಕಂಬನಿ ಮಿಡಿದಿದ್ದಾರೆ. ಮುಂದೆ ಓದಿ..
ಚಿರು ಅಗಲಿಕೆಗೆ ಕಂಬನಿ ಮಿಡಿದ ಪರಭಾಷೆ ನಟ-ನಟಿಯರು
ಸಂತಾಪ ಸೂಚಿಸಿ ಶ್ರುತಿ ಪೋಸ್ಟ್
ನಟಿ ಶ್ರುತಿ ಹರಿಹರನ್, ಚಿರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶ್ರುತಿ "ಈ ಸುದ್ದಿ ಕೇಳಿ ನಿಜಕ್ಕು ಹೃದಯಛಿದ್ರವಾಯಿತು. ಶಾಕ್ ಅಲ್ಲಿದ್ದೀನಿ. ಆತ್ಮಕ್ಕೆ ಶಾಂತಿ ಸಿಗಲಿ. ಮೇಘನಾ ರಾಜ್ ಗೆ ದುಃಖಭರಿಸುವ ಶಕ್ತಿ ದೇವರು ನೀಡಲಿ" ಎಂದು ಬರೆದುಕೊಂಡಿದ್ದಾರೆ.
ಆದ್ಯಾ ಸಿನಿಮಾದಲ್ಲಿ ಒಟ್ಟಿಗೆ ನಟನೆ
ನಟಿ ಶ್ರುತಿ ಹರಿಹರನ್, ಚಿರು ಸರ್ಜಾ ಜೊತೆ ಆದ್ಯಾ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಚಿರು ಜೊತೆ ಶ್ರುತಿ ಹರಿಹರನ್ ಸ್ಕ್ರೀನ್ ಶೇರ್ ಮಾಡಿದ್ದರು. ಈ ಸಿನಿಮಾ ಇದೆ ವರ್ಷ ಪ್ರಾರಂಭದಲ್ಲಿ ಅಂದರೆ ಫೆಬ್ರವರಿಯಲ್ಲಿ ರಿಲೀಸ್ ಆಗಿದೆ.
ಚಿರಂಜೀವಿ & ಅರ್ಜುನ್ ಫ್ಯಾಮಿಲಿಯ ಚಿತ್ರರಂಗದ ನಂಟು
ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ
ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀ ಟೂ ಆರೋಪ ಮಾಡಿದ್ದರು. ಈ ಘಟನೆ ನಂತರ ಸರ್ಜಾ ಕುಟುಂಬದ ಜೊತೆ ವೈಮನಸ್ಸು ಹೆಚ್ಚಾಗಿತ್ತು. ಆ ಸಮಯದಲ್ಲಿ ಸಹೋದರರಾದ ಚಿರು ಸರ್ಜಾ ಮತ್ತು ಧ್ರುವ ಸರ್ಜಾ ಇಬ್ಬರು ಮಾವ ಅರ್ಜುನ್ ಸರ್ಜಾ ಪರ ನಿಂತಿದ್ದರು. ಆದರೆ ಇದನ್ನೆಲ್ಲ ಮರೆತು ಶ್ರುತಿ, ಚಿರು ಸಾವಿಗೆ ಸಂತಾಪ ಸೂಚಿಸಿ, ಮೇಘನಾ ರಾಜ್ ಗೆ ಸಾಂತ್ವನ ಹೇಳಿದ್ದಾರೆ.
ಚಿರು ಜೊತೆಗಿನ ನೆನಪು ಮೆಲುಕು ಹಾಕಿ ಅರ್ಜುನ್ ಸರ್ಜಾ ಕುಟುಂಬಕ್ಕೆ ಸಾಂತ್ವನ ಹೇಳಿದ ಚೇತನ್
ನಟ ಚೇತನ್ ಟ್ವೀಟ್
ನಟ ಚೇತನ್ ಸಹ ಸಂತಾಪ ಸೂಚಿಸಿದ್ದಾರೆ. "ನನ್ನ ಸ್ನೇಹಿತ ಮತ್ತು ಸಹ ನಟ ಚಿರು ನಿಧನ ನಿಜಕ್ಕು ದುಃಖ ತಂದಿದೆ. ನಾವಿಬ್ಬರು ಸಿನಿಮಾ ಮಾಡುವ ಮೊದಲೆ ತಿಳಿದಿದ್ದವರು. ಯಾವಾಗಲು ಖುಷಿ ಮತ್ತು ಕಾಳಜಿಯುಳ್ಳ ವ್ಯಕ್ತಿಯಾಗಿದ್ದರು. ಇನ್ನೂ ರಿಲೀಸ್ ಆಗದ ರಣಂ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿದ್ದೆವು. ಅತೀ ಶೀಘ್ರದಲ್ಲಿಯೇ ಹೊರಟು ಹೋದ್ರಿ ಗೆಳೆಯ. ಮೇಘನಾ, ಧ್ರುವ, ಅರ್ಜುನ್ ಸರ್ ಮತ್ತು ಸರ್ಜಾ ಫ್ಯಾಮಿಲಿಗೆ ನನ್ನ ಸಾಂತ್ವನ" ಎಂದು ಹೇಳಿದ್ದಾರೆ.