Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ಜಾ ವಿರುದ್ಧ ಶ್ರುತಿ ಬಳಿ ಇದೆಯಂತೆ 'ವಿಡಿಯೋ' ಸಾಕ್ಷಿ.!
Recommended Video
ಸ್ಯಾಂಡಲ್ ವುಡ್ ನಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರ ಮೀಟೂ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಸರ್ಜಾ ಅಭಿಮಾನಿಗಳು ಶ್ರುತಿಯನ್ನ ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದಾರೆ ಮತ್ತು ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬಳಿಕ ಮಾತನಾಡಿದ ಶ್ರುತಿ ಹರಿಹರನ್, ''ಸರ್ಜಾ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿಯಿದ್ದ ಸಾಕ್ಷಿಗಳನ್ನ ಕೋರ್ಟ್ ಗೆ ಸಲ್ಲಿಸಿದ್ದೇವೆ. ನನ್ನ ಬಳಿಯೂ ವಿಡಿಯೋ ಸಾಕ್ಷಿಗಳು ಇವೆ, ಅದನ್ನ ಕೂಡ ನ್ಯಾಯಾಲಯಕ್ಕೆ ಒದಗಿಸಲಾಗಿದೆ'' ಎಂದು ಹೇಳಿದ್ದಾರೆ.
ಸರ್ಜಾ ವಿಷ್ಯದಲ್ಲಿ ಶ್ರುತಿ ಹೀಗೆ ಮಾಡಬಹುದಿತ್ತು, ಯಾಕೆ ಮಾಡಿಲ್ಲ: ಗುರು ಪ್ರಸಾದ್
ಇನ್ನು 'ವಿಸ್ಮಯ' ಚಿತ್ರದ ಶೂಟಿಂಗ್ ವೇಳೆ ನಟ ಸರ್ಜಾ ನನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ದಾಖಲಿಸಿದ್ದರು.
ಸರ್ಜಾ - ಶ್ರುತಿ ಮೀಟೂ ಪ್ರಕರಣ : ತಪ್ಪು ಒಪ್ಪುಗಳ ಬಗ್ಗೆ ಕಿಶೋರ್ ಮಾತು
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಬ್ಬನ್ ಪಾರ್ಕ್ ಪೊಲೀಸರು ಸರ್ಜಾ ವಿರುದ್ಧ ಎಫ್.ಐ.ಆರ್ ಕೂಡ ಹಾಕಿದ್ದರು. ಈ ಎಫ್.ಐ.ಆರ್ ರದ್ದು ಕೋರಿ ಸರ್ಜಾ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆಯನ್ನ ನವೆಂಬರ್ 28ಕ್ಕೆ ಮುಂದೂಡಿದೆ.
ಪತಿವ್ರತೆ ಅಂತ ಸಾಬೀತು ಮಾಡೋಕೆ 'ಮೀಟೂ': ಗುರುಪ್ರಸಾದ್ ಫೈರ್.!
ಮತ್ತೊಂದೆಡೆ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಕೂಡ ನ್ಯಾಯಾಲಯದಲ್ಲಿ ಹೋರಾಟ ಮಾಡ್ತಿದ್ದಾರೆ. ಶ್ರುತಿ ಅವರ ಹೇಳಿಕೆಗೆ ನಿರ್ಬಂಧ ಹೇರಬೇಕು ಮತ್ತು ಮಾನಹಾನಿ ಮಾಡಿದ್ದಾರೆ ಎಂದು ದೂರಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಶ್ರುತಿ ವಿರುದ್ಧ ಎಫ್.ಐ.ಆರ್ ಹಾಕಿದ್ದರು. ಈ ಎಫ್.ಐ.ಆರ್ ರದ್ದು ಕೋರಿ ಶ್ರುತಿ ಕೂಡ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣದ ವಿಚಾರಣೆಯೂ ಮುಂದೂಡಿಕೆಯಾಗಿದೆ.