Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲ್ಮ್ ಚೇಂಬರ್ ಗೆ ಬಂದ ಅರ್ಜುನ್ ಸರ್ಜಾ, ಶ್ರುತಿ
ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ವಿವಾದದ ಕುರಿತಾಗಿ ಇದೀಗ ಫಿಲ್ಮ್ ಚೇಂಬರ್ ನಲ್ಲಿ ಸಭೆ ಶುರುವಾಗುತ್ತಿದೆ. ಇದೊಂದು ವಿಚಾರಣೆಯ ಪ್ರಕ್ರಿಯೆಯಾಗಿದ್ದು, ಇದು ಸಂಧಾನ ಸಭೆ ಅಲ್ಲ ಎಂದು ನಿರ್ಮಾಪಕ ಕೆ ಮಂಜು ಸ್ಪಷ್ಟ ಪಡಿಸಿದ್ದಾರೆ.
ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಚೇರಿಗೆ ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಆಗಮಿಸಿದ್ದಾರೆ. ಹಿರಿಯ ನಟ ಹಾಗೂ ಅರ್ಜುನ್ ಸರ್ಜಾ ಅವರ ಮಾವ ರಾಜೇಶ್ ಅವರ ದೂರಿನ ಹಿನ್ನಲೆ ಇಂದಿನ ಸಭೆ ನಡೆಯುತ್ತಿದೆ.
ಉಳಿದಂತೆ, ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್, ನಟಿ ಪೂಜಾ ಗಾಂಧಿ, ರೂಪ ಅಯ್ಯರ್, ಕವಿತಾ ಲಂಕೇಶ್, ಹಿರಿಯನ ನಟ ಲೋಕ್ ನಾಥ್, ಫಿಲ್ಮ್ ಚೇಂಬರ್ ಅಧ್ಯಕ್ಷ ಚಿನ್ನೆ ಗೌಡ, ಮಾಜಿ ಅಧ್ಯಕ್ಷ ಸಾರಾ ಗೋವಿಂದು, ನಿರ್ಮಾಪಕ ಕೆ ಮಂಜು, ಮುನಿರತ್ನ ಹಾಗೂ ಹಿರಿಯ ಕಲಾವಿದರು ಸಭೆಯಲ್ಲಿ ಇರಲಿದ್ದಾರೆ.
ಕೆಲ ದಿನಗಳ ಹಿಂದೆ ನಟ ಅರ್ಜುನ್ ಸರ್ಜಾ ಅವರ ಮೇಲೆ ನಟಿ ಶ್ರುತಿ ಹರಿಹರನ್ ಮೀ ಟೂ ಆರೋಪ ಮಾಡಿದ್ದರು. 'ವಿಸ್ಮಯ' ಸಿನಿಮಾದ ವೇಳೆ ತಮ್ಮ ಮೇಲೆ ಕೆಟ್ಟ ಅನುಭವ ಆಗಿದೆ ಎಂದು ಶ್ರುತಿ ಆರೋಪ ಮಾಡಿದ್ದರು.