Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುವರತ್ನ' ಚಿತ್ರತಂಡದಲ್ಲಿ ಹರಿಕೃಷ್ಣ ಇಲ್ಲ : ಪುನೀತ್ ಚಿತ್ರಕ್ಕೆ ಬೇರೆ ಮ್ಯೂಸಿಕ್ ಡೈರೆಕ್ಟರ್
'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಹಾಗೂ 'ರಾಜಕುಮಾರ' ಈ ಎರಡು ಸಿನಿಮಾಗಳಿಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಇದೆ. ಸಂತೋಷ್ ಅವರ ಈ ಎರಡು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದು, ವಿ ಹರಿಕೃಷ್ಣ.
ಹೀಗಾಗಿ, ಸಂತೋಷ್ ಆನಂದ್ ರಾಮ್ ಅವರ ಮೂರನೇ ಸಿನಿಮಾ 'ಯುವರತ್ನ' ಚಿತ್ರಕ್ಕೂ ಹರಿಕೃಷ್ಣ ಸಂಗೀತ ನೀಡಬಹುದು ಎನ್ನುವ ಕುತೂಹಲ ಇತ್ತು. ಆದರೆ, ಈ ಸಿನಿಮಾಗೆ ಮತ್ತೊಬ್ಬ ಸಂಗೀತ ನಿರ್ದೇಶಕರ ಆಗಮನ ಆಗಿದೆ.
'ಯುವರತ್ನ' ಚಿತ್ರಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟ ಪ್ರಕಾಶ್ ರೈ
'ಯುವರತ್ನ' ಸಿನಿಮಾದ ಸಂಗೀತ ನಿರ್ದೇಶಕರ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಟಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ತಮನ್ ಈ ಚಿತ್ರಕ್ಕೆ ಮ್ಯೂಸಿಕ್ ನೀಡುತ್ತಿದ್ದಾರೆ. ಈ ಹಿಂದೆ ಕನ್ನಡದ ಕೆಲವು ಸಿನಿಮಾಗಳಿಗೆ ತಮನ್ ಕೆಲಸ ಮಾಡಿದ್ದರು.
ಪುನೀತ್ ರಾಜ್ ಕುಮಾರ್ ನಟನೆಯ 'ಪವರ್ ಸ್ಟಾರ್' ಹಾಗೂ 'ಚಕ್ರವ್ಯೂಹ' ಸಿನಿಮಾಗೆ ತಮನ್ ಸಂಗೀತ ನೀಡಿದ್ದರು. 'ಚಕ್ರವ್ಯೂಹ' ಚಿತ್ರದ ಮೂಲಕ ಗಾಯಕರನ್ನಾಗಿ ಕನ್ನಡ ಚಿತ್ರರಂಗಕ್ಕೆ ನಟ ಜೂನಿಯರ್ ಎನ್ ಟಿ ಆರ್ ಹಾಗೂ ನಟಿ ಕಾಜಲ್ ಅಗರ್ವಾಲ್ ರನ್ನು ಪರಿಚಯ ಮಾಡಿದ್ದರು.
'ಯುವರತ್ನ' ಚಿತ್ರದಲ್ಲಿ 'ಸಾಹೋ' ಸಾಹಸ ನಿರ್ದೇಶಕ
'ಚಕ್ರವ್ಯೂಹ' ಸಿನಿಮಾದ ಹಾಡುಗಳು ಹಿಟ್ ಆಗಿದ್ದು, ತಮನ್ ಅವರ 'ಯುವರತ್ನ' ಹಾಡುಗಳ ಮೇಲೆ ನಿರೀಕ್ಷೆ ಇದೆ.