Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಮನೆಯಲ್ಲಿ ಮಹತ್ವದ ಸಭೆ: ಯಾವೆಲ್ಲಾ ನಟರು ಹಾಜರಿದ್ದರು?
ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್ ನಾಯಕ ನಟರು ಇಂದು ಶಿವರಾಜ್ ಕುಮಾರ್ ಮನೆಯಲ್ಲಿ ಒಗ್ಗೂಡಿದ್ದರು.
Recommended Video
ಶಿವರಾಜ್ ಕುಮಾರ್ ಅವರಿಗೆ ಕನ್ನಡ ಚಿತ್ರರಂಗದ ನಾಯಕತ್ವವನ್ನು ಕೆಲವು ದಿನಗಳ ಹಿಂದಷ್ಟೆ ವಹಿಸಿಕೊಡಲಾಗಿದೆ. ಅದರ ಬೆನ್ನಲ್ಲೆ ಸ್ಟಾರ್ ನಟರು ಹಮ್ಮು ಬಿಟ್ಟು ಶಿವಣ್ಣ ಮನೆಯಲ್ಲಿ ಸೇರಿ 'ನಾವೆಲ್ಲರೂ ಶಿವಣ್ಣನ ಜೊತೆಗಿದ್ದೇವೆ' ಎಂಬುದನ್ನು ಸಾರಿ ಹೇಳಿದ್ದಾರೆ.
ಸಾವಿರ ಜನರನ್ನು ಹಿಂದೆ ಇಟ್ಟುಕೊಂಡವನು ಲೀಡರ್ ಅಲ್ಲ: ಶಿವರಾಜ್ ಕುಮಾರ್
ಇಂದು ಶಿವರಾಜ್ ಕುಮಾರ್ ನಿವಾಸದಲ್ಲಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರನ್ನು ಆಹ್ವಾನಿಸಿ ಚಿತ್ರರಂಗದ ಪ್ರಸ್ತುತ ಸಮಸ್ಯೆಗಳು ಹಾಗೂ ಎದುರಿಸಲಿರುವ ಸವಾಲುಗಳು ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಯಾವ-ಯಾವ ನಾಯಕರು ಭಾಗವಹಿಸಿದ್ದರು?
ಶಿವರಾಜ್ ಕುಮಾರ್ ಮನೆಯಲ್ಲಿ ತಾರೆಯರ ದಂಡೇ ಇಂದು ಸೇರಿತ್ತು. ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಪುನೀತ್ ರಾಜ್ಕುಮಾರ್, ಯಶ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ಗಣೇಶ್, ದುನಿಯಾ ವಿಜಯ್ ಇನ್ನೂ ಹತ್ತು ಹಲವು ನಟ-ನಿರ್ಮಾಪಕರು ಭಾಗವಹಿಸಿದ್ದರು.
ಚಿತ್ರಕಾರ್ಮಿಕರಿಗೆ ಪ್ಯಾಕೇಜ್ ಕೊಡುವಂತೆ ಒತ್ತಾಯ
ಸಚಿವ ಸಿಟಿ.ರವಿ ಅವರೊಂದಿಗೆ ನಡೆದ ಸಭೆಯಲ್ಲಿ ಕಿರುತೆರೆ ಮತ್ತು ಚಲನಚಿತ್ರ ಉದ್ಯಮವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್ ಹಾಗು ಚಲನಚಿತ್ರರಂಗದ ಪುನಶ್ಚೇತನದ ನೆರವಿಗಾಗಿ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರ ಮಂದಿರ ತೆರೆಯಲು ಹಾಗು ದರ ನಿಗದಿ, ತೆರಿಗೆ ವಿನಾಯಿತಿ ಬಗ್ಗೆ ಚರ್ಚೆ ನಡೆಸಲಾಗಿದೆ.
ನಾವೆಲ್ಲರೂ ಜತೆಯಾಗಿದ್ದೇವೆ, ಶೀಘ್ರವೇ ಚಿತ್ರೀಕರಣ ಆರಂಭಿಸುತ್ತೇವೆ: ಶಿವರಾಜ್ ಕುಮಾರ್ ಭರವಸೆ
ಸಿಎಂ ಜೊತೆ ಚರ್ಚೆಯ ಭರವಸೆ
ಸಭೆಯಲ್ಲಿ ನಡೆದ ಮಾತುಕತೆ, ಚಿತ್ರರಂಗದ ಬೇಡಿಕೆಗಳನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು ಅವರೊಟ್ಟಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂಬ ಭರವಸೆಯನ್ನು ಸಚಿವ ಸಿ.ಟಿ.ರವಿ ಚಿತ್ರರಂಗದ ಗಣ್ಯರಿಗೆ ತಿಳಿಸಿದ್ದಾರೆ.
ಚಿತ್ರರಂಗದ ಮುಂದಾಳತ್ವ ವಹಿಸಿಕೊಳ್ತಾರಾ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್?
ದರ್ಶನ್, ಸುದೀಪ್ ಭಾಗವಹಿಸಿಲ್ಲ
ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದರ್ಶನ್, ಸುದೀಪ್ ಸೇರಿ ಇನ್ನೂ ಕೆಲವು ಪ್ರಮುಖರು ಭಾಗವಹಿಸಿಲ್ಲ. ಶಿವರಾಜ್ ಕುಮಾರ್ ಅವರಿಗೆ ನಾಯಕತ್ವ ವಹಿಸಿದ್ದರ ಬಗ್ಗೆ ಆ ಇಬ್ಬರೂ ನಟರ ಸಹಮತ ಇದೆ ಎನ್ನಲಾಗಿದೆ.