Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆ.ಜಿ.ಎಫ್' ಬಿಡುಗಡೆ ಆಗುತ್ತಾ? ಇಲ್ವಾ? ಅಭಿಮಾನಿಗಳಲ್ಲಿ ಗೊಂದಲ!
ದೇಶದಾದ್ಯಂತ 'ಕೆ.ಜಿ.ಎಫ್' ಫೀವರ್ ಜೋರಾಗಿದೆ. 'ಕೆ.ಜಿ.ಎಫ್' ಚಿತ್ರವನ್ನ ಬರಮಾಡಿಕೊಳ್ಳಲು ಅಭಿಮಾನಿಗಳೆಲ್ಲಾ ಭರ್ಜರಿ ತಯಾರಿ ನಡೆಸುತ್ತಿರುವಾಗಲೇ, ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದೆ.
'ಕೆ.ಜಿ.ಎಫ್' ಚಿತ್ರ ಬಿಡುಗಡೆಗೆ ಬೆಂಗಳೂರಿನ ಸಿವಿಲ್ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಜನವರಿ 7, 2019 ರವರೆಗೂ 'ಕೆ.ಜಿ.ಎಫ್' ಬಿಡುಗಡೆಗೆ ತಡೆ ನೀಡಲಾಗಿದೆ.
ರೌಡಿ ತಂಗಂ ಜೀವನಚರಿತ್ರೆಯ ಹಕ್ಕು ಪಡೆದಿದ್ದ ರಾಜೇಶ್ವರಿ ಕಂಬೈನ್ಸ್ ನ ವೆಂಕಟೇಶ್ ಎಂಬುವರು 'ಕೆ.ಜಿ.ಎಫ್' ಸಿನಿಮಾ ರೌಡಿ ತಂಗಂ ಕಥೆ ಹೊಂದಿದೆ ಎಂದು ಆರೋಪಿಸಿ, ಬಿಡುಗಡೆಗೆ ತಡೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ.
'ಕೆಜಿಎಫ್' ರಿಲೀಸ್ ಗೆ ತಡೆ: ಸಿವಿಲ್ ಕೋರ್ಟ್ ಆದೇಶ
ನ್ಯಾಯಾಲಯ ಬಿಡುಗಡೆಗೆ ತಡೆ ನೀಡಿರುವ ಕಾರಣ, ನಾಳೆ ಚಿತ್ರ ಬಿಡುಗಡೆ ಆಗುತ್ತೋ, ಇಲ್ವೋ ಎಂಬ ಗೊಂದಲದಲ್ಲಿದ್ದಾರೆ ಅಭಿಮಾನಿಗಳು. ಇತ್ತ ಕೋರ್ಟ್ ನಿಂದ ತಡೆಯಾಜ್ಞೆಯ ಆದೇಶದ ಪ್ರತಿ ನಮ್ಮ ಕೈ ಸೇರಿಲ್ಲ ಅಂತ ಚಿತ್ರತಂಡ ತಿಳಿಸಿದೆ.
'ಕೆಜಿಎಫ್' ಬಿಡುಗಡೆಗೆ ಬ್ರೇಕ್ ಹಾಕಿದ ವೆಂಕಟೇಶ್ ಯಾರು? ಬೇಡಿಕೆ ಏನು?
''ಇದುವರೆಗೆ ನಮಗೆ ತಡೆಯಾಜ್ಞೆ ಅಂತ ಯಾವುದೇ ನೋಟೀಸ್ ಬಂದಿಲ್ಲ. ನಾಳೆ ಚಿತ್ರ ಬಿಡುಗಡೆ ಆಗಲಿದೆ. ಕೋರ್ಟ್ ನಿಂದ ಆದೇಶ ಬಂದರೆ, ಅದಕ್ಕೆ ಉತ್ತರ ಕೊಡುವೆ. ನಾನು ಆಫೀಸ್ ನಲ್ಲಿ ಇಲ್ಲ. ನನಗೆ ಯಾವುದೇ ನೋಟೀಸ್ ಅಧಿಕೃತವಾಗಿ ಬಂದಿಲ್ಲ. 'ಕೆ.ಜಿ.ಎಫ್' ಚಿತ್ರದಲ್ಲಿ ಯಾವ ರೌಡಿ ಕಥೆಯೂ ಇಲ್ಲ'' ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಸ್ಪಷ್ಟ ಪಡಿಸಿದ್ದಾರೆ.
ಒಟ್ನಲ್ಲಿ, 'ಕೆ.ಜಿ.ಎಫ್' ನೋಡಲು ತುದಿಗಾಲಿನಲ್ಲಿ ನಿಂತಿದ್ದ ಅಭಿಮಾನಿಗಳಿಗೆ ಸದ್ಯ ಕನ್ಫ್ಯೂಶನ್ ಕಾಡುತ್ತಿರುವುದು ಸುಳ್ಳಲ್ಲ.